ನವದೆಹಲಿ : ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾಮಾರಿ ಬಾರದಿದ್ದರೆ ಧೋನಿ, ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂದು ಚಾಹಲ್ ಹೇಳಿದ್ದಾರೆ. ಭಾರತ ತಂಡಕ್ಕೆ ಎಲ್ಲ ರೀತಿಯ ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಏಕೈಕ ನಾಯಕ ಎಂಎಸ್ ಧೋನಿ ಕಳೆದ ಶನಿವಾರ ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಅಲ್ಲದೇ, ಅವರೊಂದಿಗೆ ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. 

ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್‌ನಲ್ಲಿ ಧೋನಿ ಆಡಲಿದ್ದರು. ಆದರೆ, ಮಹಾಮಾರಿಯ ಅಟ್ಟಹಾಸದಿಂದಾಗಿ ಈ ಟೂರ್ನಿ 2022ಕ್ಕೆ ಮುಂದೂಡಲ್ಪಟ್ಟಿತು. ಹೀಗಾಗಿ ಧೋನಿ ನಿವೃತ್ತಿ ಘೋಷಿಸಿದ್ದಾರೆ. ಇಲ್ಲದಿದ್ದರೆ ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂಬ ಗಾಳಿಸುದ್ದಿ ಕ್ರಿಕೆಟ್ ವಲಯದಲ್ಲಿ ಓಡಾಡುತ್ತಿದೆ. ಇದೇ ಮಾತನ್ನು ಚಾಹಲ್ ಕೂಡ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ರಿಕೆಟ್ ನಲ್ಲಿ ಧೋನಿ ಸ್ಥಾನದಲ್ಲಿ ಧೋನಿ ಮಾತ್ರ ಇದ್ದಾರೆ…ಬೇರೆ ಯಾರೂ ಇಲ್ಲ ಎಂದ ರಾಹುಲ್!

ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ.

ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬಹುದಾದ ತಂಡ ಕೈಬಿಟ್ಟಿದ್ದಕ್ಕೆ ನಾಯಕ ಹೇಳಿದ್ದೇನು?

ದುಬೈ : ಪಂಜಾಬ್ ವಿರುದ್ಧ ಸುಲಭವಾಗಿ ಗೆಲ್ಲಬೇಕಾದ ಪಂದ್ಯವನ್ನು ಹೈದ್ರಾಬಾದ್ ಕೈ ಚೆಲ್ಲಿದೆ. ಹೀಗಾಗಿ ಟೀಕೆಗಳು ವ್ಯಕ್ತವಾಗುತ್ತಿವೆ.

ಅನಿಲ್ ಕುಂಬ್ಳೆಗೆ ಶುಭಾಶಯ ಕೋರಿ ಸಾಧನೆ ಕೊಂಡಾಡಿದ ಸುದೀಪ್!

ಬೆಂಗಳೂರು : ಕಿಚ್ಚ ಸುದೀಪ್ ಅವರು ಮಾಜಿ ಕ್ರಿಕೆಟ್ ಅನಿಲ್ ಕುಂಬ್ಳೆ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ಫೆ. 12 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ

ಮುಳಗುಂದ ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.