ಮೈಸೂರು: ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22  ಜನರ ಸಾವಿಗೆ  ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಲೆಮಹದೇಶ್ವರ ಸಮೀಪದ ಮಾರ್ಟಳ್ಳಿಯವನಾದ ಈತ ಕಳೆದ 25 ವರ್ಷಗಳಿಂದಲೂ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ. ಕೆ.ಆರ್.ಆಸ್ಪತ್ರೆಯಲ್ಲಿ ಬಿಲವೇಂದ್ರನ್, ತಡರಾತ್ರಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹತ್ತು ದಿನಗಳ ಹಿಂದೆ ಜೈಲಿನಲ್ಲಿ ಪ್ರಜ್ಞಾಶೂನ್ಯನಾಗಿದ್ದ ಈತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರಸಂಬಂಧಿ ಸಮಸ್ಯೆಗಳಿಂದಾಗಿ ಈತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಈತನ ಶಿಕ್ಷೆಯ ಪ್ರಮಾಣವನ್ನು ನಂತರ‌ ಜೀವಾವಧಿ‌‌‌ ಶಿಕ್ಷೆಗೆ ಪರಿವರ್ತಿಸಲಾಗಿತ್ತು.

ಇದನ್ನೂ ಓದಿ: ಕೊರೋನಾ ಹಾಗೂ ಲಾಕ್‌ಡೌನ್‌ದಿಂದ ಭಾರತದ ಅರ್ಥಿಕತೆಯ ಮೇಲಾದ ಪರಿಣಾಮ

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

ಗದಗನಲ್ಲಿ ಮತ್ತೆ ಐದು ಪಾಸಿಟಿವ್!

ಗದಗ: ಜಿಲ್ಲೆಯಲ್ಲಿ ಮತ್ತೆ ಐದು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.ಎರಡು ಕೇಸ್ ಕಂಟೈನಮೆಂಟ್ ಝೂನ್ ಹಾಗೂ…

ಗುಲಗಂಜಿಕೊಪ್ಪ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…