ಮೈಸೂರು: ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22  ಜನರ ಸಾವಿಗೆ  ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಲೆಮಹದೇಶ್ವರ ಸಮೀಪದ ಮಾರ್ಟಳ್ಳಿಯವನಾದ ಈತ ಕಳೆದ 25 ವರ್ಷಗಳಿಂದಲೂ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ. ಕೆ.ಆರ್.ಆಸ್ಪತ್ರೆಯಲ್ಲಿ ಬಿಲವೇಂದ್ರನ್, ತಡರಾತ್ರಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹತ್ತು ದಿನಗಳ ಹಿಂದೆ ಜೈಲಿನಲ್ಲಿ ಪ್ರಜ್ಞಾಶೂನ್ಯನಾಗಿದ್ದ ಈತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರಸಂಬಂಧಿ ಸಮಸ್ಯೆಗಳಿಂದಾಗಿ ಈತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಈತನ ಶಿಕ್ಷೆಯ ಪ್ರಮಾಣವನ್ನು ನಂತರ‌ ಜೀವಾವಧಿ‌‌‌ ಶಿಕ್ಷೆಗೆ ಪರಿವರ್ತಿಸಲಾಗಿತ್ತು.

ಇದನ್ನೂ ಓದಿ: ಕೊರೋನಾ ಹಾಗೂ ಲಾಕ್‌ಡೌನ್‌ದಿಂದ ಭಾರತದ ಅರ್ಥಿಕತೆಯ ಮೇಲಾದ ಪರಿಣಾಮ

Leave a Reply

Your email address will not be published. Required fields are marked *

You May Also Like

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.