ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ!: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

Dr.sudhakar Doctors mysore

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

ಮೈಸೂರು: ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಮೃತ ಡಾ.ನಾಗೇಂದ್ರ ಅಂತಿಮ ದರ್ಶನ ಪಡೆದ ನಂತರ ಸಚಿವ ಡಾ.ಕೆ.ಸುಧಾಕರ್ ಪ್ರತಿಭಟನಾ ನಿರತ ವೈದ್ಯರ ಭೇಟಿ ವೇಳೆ ಮಹಿಳಾ ವೈದ್ಯೆಯೊಬ್ಬರು ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವೈದ್ಯೆಯ ತರಾಟೆಗೆ ಸಚಿವ ಸುಧಾಕರ್ ಮಾತ್ರ ಮೌನಿಯಾಗಿದ್ದರು. ನಂಜನಗೂಡು ಟಿಹೆಚ್‌ಓ ಆತ್ಮಹತ್ಯೆ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ವೇಳೆ ಈ ಘಟನೆ ನಡೆಯಿತು.  

Exit mobile version