ಮೈಸೂರು: ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಮೃತ ಡಾ.ನಾಗೇಂದ್ರ ಅಂತಿಮ ದರ್ಶನ ಪಡೆದ ನಂತರ ಸಚಿವ ಡಾ.ಕೆ.ಸುಧಾಕರ್ ಪ್ರತಿಭಟನಾ ನಿರತ ವೈದ್ಯರ ಭೇಟಿ ವೇಳೆ ಮಹಿಳಾ ವೈದ್ಯೆಯೊಬ್ಬರು ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವೈದ್ಯೆಯ ತರಾಟೆಗೆ ಸಚಿವ ಸುಧಾಕರ್ ಮಾತ್ರ ಮೌನಿಯಾಗಿದ್ದರು. ನಂಜನಗೂಡು ಟಿಹೆಚ್‌ಓ ಆತ್ಮಹತ್ಯೆ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ವೇಳೆ ಈ ಘಟನೆ ನಡೆಯಿತು.  

Leave a Reply

Your email address will not be published. Required fields are marked *

You May Also Like

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಹಾಲಸ್ವಾಮಿಜಿ ಲಿಂಗೈಕ್ಯ: ಸೋಂಕಿನ ಛಾಯೆ?

ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು