ತೆಲಂಗಾಣ: ಶ್ರೀಶೈಲಂ ಪವರ್‌ ಸ್ಟೇಷನ್‌ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಜನರನ್ನು ರಕ್ಷಿಸಲಾಗಿದೆ. ಅಲ್ಲದೇ, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ 6 ಜನ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಒಳಗೆ ಸಿಲುಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ ನಲ್ಲಿ ಬೆಳಿಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದಾಗಿ ಐವರು ಎಂಜನೀಯರ್ ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಜನ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಪ್ಯಾನೆಲ್ ಬೋರ್ಡ್ ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ ನಲ್ಲಿದ್ದ 10 ಜನ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಒಟ್ಟು 19 ಜನ ಒಳಗಿದ್ದರು. ಈ ಪೈಕಿ 10 ಜನರ ರಕ್ಷಣೆಯಾಗಿದ್ದು, 9 ಜನರಿಗಾಗಿ ಶೋಧ ನಡೆದಿದೆ. ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ 6 ಯೂನಿಟ್ ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ದೇಶದಲ್ಲಿ 240ಕ್ಕೂ ಹೆಚ್ಚು ಸೋಂಕು ಪತ್ತೆ

ದೇಶದಲ್ಲಿ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…