ಮುಂಬಯಿ: ಮಾದಕ ನಟಿ ಬಿಪಾಶಾ ಬಸು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಬಹುತೇಕ ಚಿತ್ರಗಳಲ್ಲಿ ಹಾಟ್ ಆಂಡ್ ಬೋಲ್ಡ್ ಪಾತ್ರಗಳಲ್ಲಿಯೇ ನಟಿಸಿ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ.

ಆದರೆ, ಈ ನಟಿ ಎಷ್ಟೇ ಮಾದಕವಾಗಿದ್ದರೂ ನೇರ ಹಾಗೂ ನಿಷ್ಠುರ. ಅವರಿಗೆ ಚಿತ್ರಗಳಲ್ಲಿ ಅವಕಾಶ ಮಾತ್ರ ಕಡಿಮೆಯಾಗಿಲ್ಲ. ಸದ್ಯ ಅವರ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.

ಬಿಪಾಶಾ ಅವರ ಬಳಿ ಖ್ಯಾತ ನಿರ್ಮಾಪಕರೊಬ್ಬರು ಫ್ಲರ್ಟ್ ಮಾಡಿದ್ದ ವಿಚಾರವನ್ನು ಈಗ ಹಂಚಿಕೊಂಡಿದ್ದಾರೆ. ಬಿಪಾಶಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಕೆಲವೇ ದಿನಗಳಲ್ಲಿ ನಿರ್ಮಾಪಕರೊಬ್ಬರು ಇವರ ಬೆನ್ನು ಬಿದ್ದಿದ್ದರಂತೆ. ಆದರೆ, ಅವರಿಗೆ ತಕ್ಕ ಪಾಠವನ್ನು ಕೂಡ ಬಿಪಾಶಾ ನೀಡಿದ್ದರು ಎಂಬುವುದನ್ನು ತಿಳಿಸಿದ್ದಾರೆ.

ಈ ನಿರ್ಮಾಪಕನನ್ನು ಭೇಟಿ ಮಾಡಿದ್ದ ಬಿಪಾಶಾ, ಸಿನಿಮಾವೊಂದಕ್ಕೆ ಸಹಿ ಮಾಡಿ ಹಣ ಪಡೆದು ಮನೆಗೆ ತೆರಳಿದ್ದರಂತೆ. ಮನೆಗೆ ತಲುಪುತ್ತಲೇ ಮೊಬೈಲ್‌ಗೆ ಸಂದೇಶ ಕಳುಹಿಸಿದ ಆ ನಿರ್ಮಾಪಕ, ನಿನ್ನ ನಗುವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದರಂತೆ.

ಇದಕ್ಕೆ ಗಾಬರಿಯಾಗಿದ್ದ ಬಿಪಾಶಾ ಅವರು ಇದನ್ನು ತಮ್ಮ ಆಪ್ತ ಕಾರ್ಯದರ್ಶಿಯ ಬಳಿ ಹೇಳಿಕೊಂಡಿದ್ದರಂತೆ. ಆದರೆ, ನಿರ್ಮಾಪಕ ಮಾತ್ರ ಮತ್ತೆ ಮತ್ತೆ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದಾನೆ. ಆಗ ಬಿಪಾಶಾ ಇನ್ನಷ್ಟು ಗಾಬರಿಯಾದರಂತೆ.

ಬಿಪಾಶಾ ತಮ್ಮ ಗೆಳೆಯರೊಬ್ಬರಿಗೆ ನಿರ್ಮಾಪಕ ಮಾಡಿದ್ದರ ಬಗ್ಗೆ ಬೈದು ಸಂದೇಶ ಕಳುಹಿಸುತ್ತಿರುವಾಗ, ಅದೇ ಸಂದೇಶ ತಪ್ಪಿ ಆ ನಿರ್ಮಾಪಕರಿಗೂ ಹೋಗಿತ್ತಂತೆ. ಆ ನಂತರ ಆ ನಿರ್ಮಾಪಕ ಬಿಪಾಶಾಗೆ ಸಂದೇಶ ಕಳುಹಿಸುವುದನ್ನು ಬಿಟ್ಟುಬಿಟ್ಟರಂತೆ. ಈ ಕಹಿ ಘಟನೆಯನ್ನು ನಟಿ ಈಗ ಬಿಪಾಶಾ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಜಯ್ ದೇವಗನ್ ಅವರ ಸಹೋದರ ಅನಿಲ್ ಇನ್ನಿಲ್ಲ!

ಬಾಲಿವುಡ್ ನಟ ಅಜಯ್ ದೇವಗನ್ ಅವರ ಸಹೋದರ ಹಾಗೂ ನಿರ್ದೇಶಕ ಅನಿಲ್ ದೇವಗನ್ (45) ನಿಧನರಾಗಿದ್ದಾರೆ.

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…