ಚೆನ್ನೈ:  ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ಕಳೆದ 17 ದಿನಗಳಿಂದ ಎಸ್ಪಿಟಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಏಳು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊರೊನಾ ವೈರಸ್ನಿಂಿದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ. ವೆಂಟಿಲೇಟರ್ ಮತ್ತು ಎಕ್ಮೋ ಮೆಷಿನ್ ಸಪೋರ್ಟ್ನಿಂ ದ ಎಸ್ಪಿಕಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ.

ಎಸ್ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಪ್ಯಾಂಗೊಲಿನ್ ಗೂ ನಡೆಯಿತು ಕೊರೊನಾ ಪರೀಕ್ಷೆ!

ಕ್ವಾರಂಟೈನ್ ಸೆಂಟರ್ ಬಳಿ ಹೆಣ್ಣು ಪ್ಯಾಂಗೊಲಿನ್ ಗೆ ಕೊರೊನಾ ಪರೀಕ್ಷೆ ನಡೆದಿದೆ. ಬಾರಂಬಾ ವಲಯದ ಮಹುಲಿಯಾ ಯುಜಿಎಂಇ ಶಾಲೆಯ ಬಳಿ ತೆರೆಯಲಾಗಿರುವ ಕ್ವಾರಂಟೈನ್ ಕೇಂದ್ರದ ಬಳಿ ಐದು ವರ್ಷದ ಹೆಣ್ಣು ಪ್ಯಾಂಗೊಲಿನ್ ನನ್ನು ರಕ್ಷಿಸಲಾಗಿತ್ತು.

ಮೌನ್ ಮೋದಿ ಮಿಸ್ಸಿಂಗ್ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್

ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ.…

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.