ದೆಹಲಿ: ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯಶೊ ನಾಯಕ್  ಅವರಿಗೆ ತಮಿಳು ನಾಡಿನ ಲೋಕಸಭಾ ಸದಸ್ಯ ಕನಿಮೋಜಿ ಕರುಣಾನಿಧಿ ಪತ್ರ ಬರೆದಿದ್ದಾರೆ.

ಆಯುಷ್ ಇಲಾಖೆಯ ವೆಬಿನಾರ್ ಮತ್ತು ಸೆಮಿನಾರ್ ಗಳು ಹಿಂದಿ ಭಾಷೆಯಲ್ಲಿ ಮಾಡುತ್ತಿದ್ದು ಇದರಿಂದ ನೇರವಾಗಿ ನಮ್ಮ ಮೇಲೆ ಹಿಂದಿ ಭಾಷೆಯ ಹೇರಿಕೆ ಮಾಡಿದಂತಾಗುತ್ತಿದೆ.

ವೆಬಿನಾರ್ ಮತ್ತು ಸೆಮಿನಾರ್ ಗಳಲ್ಲಿ ಹಿಂದಿ ಭಾಷೆಯ ಹೇರಿಕೆ ಮಾಡಿದ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಈ ಬಗ್ಗೆ ತನಿಖೆಗೆ ಒಂದು ತಂಡ ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆ ಆನ್ ಲೈನ್ ನಲ್ಲಿ ಆಯುಷ್ ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಗಳಲ್ಲಿ ವೆಬಿನಾರ್ ಮತ್ತು ಸೆಮಿನಾರ್ ಗಳು ನಡೆಯುತ್ತಿವೆ. ಈ ಬಗ್ಗೆ ಹಿಂದಿ ಬಾರದೇ ಇರುವವರು ಮೀಟಿಂಗ್ ನಿಂದ ಹೊರಹೋಗುವಂತೆ ಆಯುಷ್ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ ಎಂದು ಈ ಬಗ್ಗೆ ಮಾದ್ಯದಲ್ಲಿ ವರದಿಯಾಗಿದೆ.

ಇದರಿಂದ ಗ್ಲಿಷ್ ಮತ್ತು ಹಿಂದಿ ಎರಡು ಸಂವಿಧಾನದ ಭಾಷೆಯಾಗಿದ್ದರಿಂದ ಹಿಂದಿಯನ್ನೆ ಮಾತನಾಡಬೇಕು ಎಂದು ಹೇಳುವ ಮೂಲಕ ಸಾಂವಿಧಾನಿಕ ನಿಯಮಗಳನ್ನೆ ಉಲ್ಲಂಘಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಆಗಸ್ಟ್ 7, 1959ರಲ್ಲಿ ಲೋಕಸಭೆಯಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರೇ ಹಿಂದಿ ಭಾಷೆ ಬಾರದವರು ಇಂಗ್ಲೀಷ್ ಬಳಕೆ ಮಾಡುವ ಬಗ್ಗೆ ಸಹಭಾಷೆಯಾಗಿ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ.

ಹೀಗಾಗಿ ಆಯುಷ್ ಇಲಾಖೆ ಅಧಿಕಾರಿಯ ಈ ವರ್ತನೆ ಸಂವಿಧಾನದ ನಿಯಮ ಉಲ್ಲಂಘನೆ ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…

ಮೋದಿ ಗೇಲಿ ಮಾಡಲು ಹೋಗಿ ಬೇಸ್ತು ಬಿದ್ದ ರಾಹುಲ್

ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ.…

‘ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಶ್ರೀರಾಮ ಭಾರತೀಯನಲ್ಲ, ನೇಪಾಳಿ’ : ನೇಪಾಳ ಪ್ರಧಾನಿ ಕಿಡಿ

‘ನಿಜವಾದ ಅಯೋಧ್ಯೆ ಇರುವುದು ಭಾರತದಲ್ಲಲ್ಲ ನೇಪಾಳದಲ್ಲಿ. ದೇವರು ರಾಮ ಭಾರತೀಯನಲ್ಲ, ನೇಪಾಳಿ’ ಎಂದು ನೇಪಾಳ ಪ್ರಧಾನಿ ಪ್ರತಿಪಾದಿಸಿದ್ದಾರೆ.

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…