ದೆಹಲಿ: ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯಶೊ ನಾಯಕ್  ಅವರಿಗೆ ತಮಿಳು ನಾಡಿನ ಲೋಕಸಭಾ ಸದಸ್ಯ ಕನಿಮೋಜಿ ಕರುಣಾನಿಧಿ ಪತ್ರ ಬರೆದಿದ್ದಾರೆ.

ಆಯುಷ್ ಇಲಾಖೆಯ ವೆಬಿನಾರ್ ಮತ್ತು ಸೆಮಿನಾರ್ ಗಳು ಹಿಂದಿ ಭಾಷೆಯಲ್ಲಿ ಮಾಡುತ್ತಿದ್ದು ಇದರಿಂದ ನೇರವಾಗಿ ನಮ್ಮ ಮೇಲೆ ಹಿಂದಿ ಭಾಷೆಯ ಹೇರಿಕೆ ಮಾಡಿದಂತಾಗುತ್ತಿದೆ.

ವೆಬಿನಾರ್ ಮತ್ತು ಸೆಮಿನಾರ್ ಗಳಲ್ಲಿ ಹಿಂದಿ ಭಾಷೆಯ ಹೇರಿಕೆ ಮಾಡಿದ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಈ ಬಗ್ಗೆ ತನಿಖೆಗೆ ಒಂದು ತಂಡ ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆ ಆನ್ ಲೈನ್ ನಲ್ಲಿ ಆಯುಷ್ ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಗಳಲ್ಲಿ ವೆಬಿನಾರ್ ಮತ್ತು ಸೆಮಿನಾರ್ ಗಳು ನಡೆಯುತ್ತಿವೆ. ಈ ಬಗ್ಗೆ ಹಿಂದಿ ಬಾರದೇ ಇರುವವರು ಮೀಟಿಂಗ್ ನಿಂದ ಹೊರಹೋಗುವಂತೆ ಆಯುಷ್ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ ಎಂದು ಈ ಬಗ್ಗೆ ಮಾದ್ಯದಲ್ಲಿ ವರದಿಯಾಗಿದೆ.

ಇದರಿಂದ ಗ್ಲಿಷ್ ಮತ್ತು ಹಿಂದಿ ಎರಡು ಸಂವಿಧಾನದ ಭಾಷೆಯಾಗಿದ್ದರಿಂದ ಹಿಂದಿಯನ್ನೆ ಮಾತನಾಡಬೇಕು ಎಂದು ಹೇಳುವ ಮೂಲಕ ಸಾಂವಿಧಾನಿಕ ನಿಯಮಗಳನ್ನೆ ಉಲ್ಲಂಘಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಆಗಸ್ಟ್ 7, 1959ರಲ್ಲಿ ಲೋಕಸಭೆಯಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರೇ ಹಿಂದಿ ಭಾಷೆ ಬಾರದವರು ಇಂಗ್ಲೀಷ್ ಬಳಕೆ ಮಾಡುವ ಬಗ್ಗೆ ಸಹಭಾಷೆಯಾಗಿ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ.

ಹೀಗಾಗಿ ಆಯುಷ್ ಇಲಾಖೆ ಅಧಿಕಾರಿಯ ಈ ವರ್ತನೆ ಸಂವಿಧಾನದ ನಿಯಮ ಉಲ್ಲಂಘನೆ ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ. 

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…