ದೆಹಲಿ: ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯಶೊ ನಾಯಕ್  ಅವರಿಗೆ ತಮಿಳು ನಾಡಿನ ಲೋಕಸಭಾ ಸದಸ್ಯ ಕನಿಮೋಜಿ ಕರುಣಾನಿಧಿ ಪತ್ರ ಬರೆದಿದ್ದಾರೆ.

ಆಯುಷ್ ಇಲಾಖೆಯ ವೆಬಿನಾರ್ ಮತ್ತು ಸೆಮಿನಾರ್ ಗಳು ಹಿಂದಿ ಭಾಷೆಯಲ್ಲಿ ಮಾಡುತ್ತಿದ್ದು ಇದರಿಂದ ನೇರವಾಗಿ ನಮ್ಮ ಮೇಲೆ ಹಿಂದಿ ಭಾಷೆಯ ಹೇರಿಕೆ ಮಾಡಿದಂತಾಗುತ್ತಿದೆ.

ವೆಬಿನಾರ್ ಮತ್ತು ಸೆಮಿನಾರ್ ಗಳಲ್ಲಿ ಹಿಂದಿ ಭಾಷೆಯ ಹೇರಿಕೆ ಮಾಡಿದ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಈ ಬಗ್ಗೆ ತನಿಖೆಗೆ ಒಂದು ತಂಡ ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆ ಆನ್ ಲೈನ್ ನಲ್ಲಿ ಆಯುಷ್ ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಗಳಲ್ಲಿ ವೆಬಿನಾರ್ ಮತ್ತು ಸೆಮಿನಾರ್ ಗಳು ನಡೆಯುತ್ತಿವೆ. ಈ ಬಗ್ಗೆ ಹಿಂದಿ ಬಾರದೇ ಇರುವವರು ಮೀಟಿಂಗ್ ನಿಂದ ಹೊರಹೋಗುವಂತೆ ಆಯುಷ್ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ ಎಂದು ಈ ಬಗ್ಗೆ ಮಾದ್ಯದಲ್ಲಿ ವರದಿಯಾಗಿದೆ.

ಇದರಿಂದ ಗ್ಲಿಷ್ ಮತ್ತು ಹಿಂದಿ ಎರಡು ಸಂವಿಧಾನದ ಭಾಷೆಯಾಗಿದ್ದರಿಂದ ಹಿಂದಿಯನ್ನೆ ಮಾತನಾಡಬೇಕು ಎಂದು ಹೇಳುವ ಮೂಲಕ ಸಾಂವಿಧಾನಿಕ ನಿಯಮಗಳನ್ನೆ ಉಲ್ಲಂಘಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಆಗಸ್ಟ್ 7, 1959ರಲ್ಲಿ ಲೋಕಸಭೆಯಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರೇ ಹಿಂದಿ ಭಾಷೆ ಬಾರದವರು ಇಂಗ್ಲೀಷ್ ಬಳಕೆ ಮಾಡುವ ಬಗ್ಗೆ ಸಹಭಾಷೆಯಾಗಿ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ.

ಹೀಗಾಗಿ ಆಯುಷ್ ಇಲಾಖೆ ಅಧಿಕಾರಿಯ ಈ ವರ್ತನೆ ಸಂವಿಧಾನದ ನಿಯಮ ಉಲ್ಲಂಘನೆ ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮದ್ಯ ಸೇವನೆಯಿಂದ ಮೃತಪಟ್ರೆ ವಿಮೆ ಪರಿಹಾರ ಇಲ್ಲ..!

ಮದ್ಯಪಾನ ಮಾಡಿ ಮೃತಪಟ್ಟವರಿಗೆ ವಿಮೆ ಪರಿಹಾರ ಸಿಗಲ್ಲ, ಅಪಘಾತದಲ್ಲಿ ಗಾಯಗೊಂಡವರಿಗೆ ಮಾತ್ರ ಪರಿಹಾರ ನೀಡಲು ವಿಮೆ ಕಂಪನಿ ಬದ್ಧವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಕೊರೊನಾ ಸೋಂಕು, ಎರಡನೇ ಬಾರಿ ಕಾಣಿಸಿಕೊಂಡರೆ ಏನಾಗಲಿದೆ?

ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಚೀನಾ ಸಂಘರ್ಷ ಅಂತ್ಯ – ಸೇನೆ ಹಿಂಪಡೆಯಲು ನಿರ್ಧಾರ!

ನವದೆಹಲಿ : ಚೀನಾ ಸಂಘರ್ಷದ ಬಳಿಕ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದ್ದಾರೆ.