ನವದೆಹಲಿ: ಕೇಂದ್ರ ಕ್ರೀಡಾ ಸಚಿವಾಲಯ ಈ ಬಾರಿಯ ಅರ್ಜುನ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಆದರೆ, ಎಲ್ಲರೂ ನಿರೀಕ್ಷೆ ಮಾಡಿದ್ದ ಸಾಕ್ಷಿ ಮಲಿಕ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ನಾನು ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಾಕ್ಷಿ ಪ್ರಶ್ನಿಸಿದ್ದಾರೆ. 

ಅರ್ಜುನ ಪ್ರಶಸ್ತಿಗಾಗಿ ಕ್ರೀಡಾ ಸಚಿವಾಲಯದ ಪಟ್ಟಿಯಲ್ಲಿ 29 ಹೆಸರುಗಳಿದ್ದವು. ಇದರಲ್ಲಿ ಸಾಕ್ಷಿ ಮತ್ತು ಚಾನು ಹೆಸರುಗಳನ್ನು ತೆಗೆದು ಹಾಕಿದ ಸಚಿವಾಲಯ 27 ಹೆಸರುಗಳನ್ನಷ್ಟೇ ಪ್ರಕಟಿಸಿತ್ತು. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆದ್ದಿದ್ದಕ್ಕಾಗಿ ಸಾಕ್ಷಿಗೆ ಖೇಲ್ ರತ್ನ ಪ್ರಶಸ್ತಿ ಲಭಿಸಿತ್ತು. 2017ರ ವಿಶ್ವ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಮೀರಾಬಾಯಿಗೂ ಪ್ರತಿಷ್ಠಿತ ಪ್ರಶಸ್ತಿ ದೊರೆತಿತ್ತು. 

ನಿಯಮಗಳ ಪ್ರಕಾರ, ದೇಶದ ಅತ್ಯುನ್ನತ ಕ್ರೀಡಾ ಗೌರವ ಗಳಿಸಿದ ಬಳಿಕ ಅದಕ್ಕಿಂತ ಕೆಳಸ್ತರದ ಪ್ರಶಸ್ತಿಗಳಿಗೆ ಕ್ರೀಡಾಪಟುಗಳನ್ನು ಪರಿಗಣಿಸುವಂತಿಲ್ಲ. ಆದರೂ ಈ ಇಬ್ಬರು ಕ್ರೀಡಾಪಟುಗಳ ಹೆಸರು ಸೇರ್ಪಡೆಯಾದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಹೀಗಾಗಿಯೇ ಆಯ್ಕೆ ಸಮಿತಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಈ ಇಬ್ಬರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸಿಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟನೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು

ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಕುಡಿದು ಬಂದು ಜಗಳ ಮಾಡುತ್ತಿದ್ದ ನಿರುದ್ಯೋಗ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗಳು!

ಭೋಪಾಲ್ : ತಂದೆಯನ್ನೇ ಕೊಲೆ ಮಾಡಿದ 16ರ ಬಾಲಕಿ ಪೊಲೀಸರಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…