ನವದೆಹಲಿ: ಕೇಂದ್ರ ಕ್ರೀಡಾ ಸಚಿವಾಲಯ ಈ ಬಾರಿಯ ಅರ್ಜುನ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಆದರೆ, ಎಲ್ಲರೂ ನಿರೀಕ್ಷೆ ಮಾಡಿದ್ದ ಸಾಕ್ಷಿ ಮಲಿಕ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ನಾನು ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಾಕ್ಷಿ ಪ್ರಶ್ನಿಸಿದ್ದಾರೆ. 

ಅರ್ಜುನ ಪ್ರಶಸ್ತಿಗಾಗಿ ಕ್ರೀಡಾ ಸಚಿವಾಲಯದ ಪಟ್ಟಿಯಲ್ಲಿ 29 ಹೆಸರುಗಳಿದ್ದವು. ಇದರಲ್ಲಿ ಸಾಕ್ಷಿ ಮತ್ತು ಚಾನು ಹೆಸರುಗಳನ್ನು ತೆಗೆದು ಹಾಕಿದ ಸಚಿವಾಲಯ 27 ಹೆಸರುಗಳನ್ನಷ್ಟೇ ಪ್ರಕಟಿಸಿತ್ತು. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆದ್ದಿದ್ದಕ್ಕಾಗಿ ಸಾಕ್ಷಿಗೆ ಖೇಲ್ ರತ್ನ ಪ್ರಶಸ್ತಿ ಲಭಿಸಿತ್ತು. 2017ರ ವಿಶ್ವ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಮೀರಾಬಾಯಿಗೂ ಪ್ರತಿಷ್ಠಿತ ಪ್ರಶಸ್ತಿ ದೊರೆತಿತ್ತು. 

ನಿಯಮಗಳ ಪ್ರಕಾರ, ದೇಶದ ಅತ್ಯುನ್ನತ ಕ್ರೀಡಾ ಗೌರವ ಗಳಿಸಿದ ಬಳಿಕ ಅದಕ್ಕಿಂತ ಕೆಳಸ್ತರದ ಪ್ರಶಸ್ತಿಗಳಿಗೆ ಕ್ರೀಡಾಪಟುಗಳನ್ನು ಪರಿಗಣಿಸುವಂತಿಲ್ಲ. ಆದರೂ ಈ ಇಬ್ಬರು ಕ್ರೀಡಾಪಟುಗಳ ಹೆಸರು ಸೇರ್ಪಡೆಯಾದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಹೀಗಾಗಿಯೇ ಆಯ್ಕೆ ಸಮಿತಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಈ ಇಬ್ಬರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸಿಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟನೆ ನೀಡಿದೆ.

Leave a Reply

Your email address will not be published. Required fields are marked *

You May Also Like

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ಆಂಟಿ ಎಂದಿದ್ದಕ್ಕೆ ಈ ರೀತಿ ಕೋಪ ಬರುತ್ತದೆಯೇ?

ಲಕ್ನೋ : ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುವ ಸಂದರ್ಭದಲ್ಲಿ ಆಂಟಿ ಎಂದು ಕರೆದಿದ್ದಕ್ಕೆ ಹುಡುಗಿಯೊಬ್ಬಳಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ.

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…