ನವದೆಹಲಿ: ಕೇಂದ್ರ ಕ್ರೀಡಾ ಸಚಿವಾಲಯ ಈ ಬಾರಿಯ ಅರ್ಜುನ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಆದರೆ, ಎಲ್ಲರೂ ನಿರೀಕ್ಷೆ ಮಾಡಿದ್ದ ಸಾಕ್ಷಿ ಮಲಿಕ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ನಾನು ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಾಕ್ಷಿ ಪ್ರಶ್ನಿಸಿದ್ದಾರೆ. 

ಅರ್ಜುನ ಪ್ರಶಸ್ತಿಗಾಗಿ ಕ್ರೀಡಾ ಸಚಿವಾಲಯದ ಪಟ್ಟಿಯಲ್ಲಿ 29 ಹೆಸರುಗಳಿದ್ದವು. ಇದರಲ್ಲಿ ಸಾಕ್ಷಿ ಮತ್ತು ಚಾನು ಹೆಸರುಗಳನ್ನು ತೆಗೆದು ಹಾಕಿದ ಸಚಿವಾಲಯ 27 ಹೆಸರುಗಳನ್ನಷ್ಟೇ ಪ್ರಕಟಿಸಿತ್ತು. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆದ್ದಿದ್ದಕ್ಕಾಗಿ ಸಾಕ್ಷಿಗೆ ಖೇಲ್ ರತ್ನ ಪ್ರಶಸ್ತಿ ಲಭಿಸಿತ್ತು. 2017ರ ವಿಶ್ವ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಮೀರಾಬಾಯಿಗೂ ಪ್ರತಿಷ್ಠಿತ ಪ್ರಶಸ್ತಿ ದೊರೆತಿತ್ತು. 

ನಿಯಮಗಳ ಪ್ರಕಾರ, ದೇಶದ ಅತ್ಯುನ್ನತ ಕ್ರೀಡಾ ಗೌರವ ಗಳಿಸಿದ ಬಳಿಕ ಅದಕ್ಕಿಂತ ಕೆಳಸ್ತರದ ಪ್ರಶಸ್ತಿಗಳಿಗೆ ಕ್ರೀಡಾಪಟುಗಳನ್ನು ಪರಿಗಣಿಸುವಂತಿಲ್ಲ. ಆದರೂ ಈ ಇಬ್ಬರು ಕ್ರೀಡಾಪಟುಗಳ ಹೆಸರು ಸೇರ್ಪಡೆಯಾದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಹೀಗಾಗಿಯೇ ಆಯ್ಕೆ ಸಮಿತಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಈ ಇಬ್ಬರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸಿಲ್ಲ ಎಂದು ಕ್ರೀಡಾ ಸಚಿವಾಲಯ ಸ್ಪಷ್ಟನೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಮಹಿಳಾ ಸಚಿವೆ ಕುರಿತು ಹೇಳಿದ ಹೇಳಿಕೆಗೆ ಮಾಜಿ ಸಿಎಂ ಹೇಳಿದ್ದೇನು?

ಭೋಪಾಲ್ : ಬಿಜೆಪಿ ಜನರು, ಮತದಾರರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಮಾಜಿ ಸಿಎಂ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಚೀನಾ ಹಿಂದಿಕ್ಕಿ ಸಾಗುತ್ತಿದೆ ಭಾರತ!

ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904…

ನನ್ನ ಮಗ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ – ಹುತಾತ್ಮ ಯೋಧನ ತಂದೆ!

ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.