ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಇಲ್ಲಿನ ಸ್ಥಳೀಯ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿದರು. ಕಾಲೊನಿಯಲ್ಲಿ ಸುಸಜ್ಜಿತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೇ ಜನ ಪರದಾಡುವಂತಾಗಿದೆ.

ಸಮರ್ಪಕ ಬೀದಿ ದೀಪಗಳ ವ್ಯವಸ್ಥೆ ಇಲ್ಲದಂತಾಗಿದೆ. ಅಂಗನವಾಡಿ ಇಲ್ಲದೆ ಇಲ್ಲಿನ ಮಕ್ಕಳ ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಅಲ್ಲದೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇಲ್ಲದಂತಾಗಿದೆ ಎಂದು ಸ್ಥಳೀಯರು ದೂರಿದರು.

ಈ ವೇಳೆ ನಾಗಪ್ಪ ಮುಳಗುಂದ, ಬಿ.ಬಿ. ರಾಜು, ಐ.ಎಫ್. ಕೋವಣ್ಣವರ, ಈಶ್ವರಪ್ಪ ನುಚ್ಚಂಬಲಿ, ಎಂ.ಎನ್. ಸಂಶಿ, ಸೋಮಣ್ಣ ಅಳ್ಳಳ್ಳಿ, ಮಂಜು ಶಿರಬಡಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version