ಹುಬ್ಬಳ್ಳಿ: ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಲಾಕ್‌ಡೌನ್ ತೆರವಾದ ಆರಂಭದ ಕೆಲ ತಿಂಗಳ ಕಾಲ ಪಾಸ್ ನೀಡಿರಲಿಲ್ಲ. ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಧಾರವಾಡ, ಗದಗ , ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪಾಸ್ ನೀಡಿ ನಷ್ಟ ಕಡಿಮೆ ಮಾಡಿಕೊಳ್ಳಲು ಸಂಸ್ಥೆ ಮುಂದಾಗಿದೆ. ಈಗ ಸಧ್ಯ
ಪಾಸ್‌ಗಳನ್ನು ಪಡೆದರೆ ಪ್ರಯಾಣಿಕರಿಗೆ ಹಣ ಉಳಿತಾಯ ವಾಗುತ್ತದೆ. ಪಟ್ಟಣಕ್ಕೆ ಹೋಗಿಬರುವ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ನಿಂದ ಹೆಚ್ಚಿನ ಲಾಭ ಸಿಗುತ್ತದೆ ಎನ್ನುವುದು ಅಧಿಕಾರಿಗಳ ಲೆಕ್ಕಚಾರ.

ಈಗಾಗಲೇ ಕೊರೊನಾ ಹಿನ್ನೆಲೆ ಪ್ರಯಾಣಿಕರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಸಂಸ್ಥೆ ಸಾಕಷ್ಟು ಹಾನಿ ಅನುಭವಿಸುವಂತಾಗಿತ್ತು. ಈ ಕಾರಣದಿಂದಾಗಿ ಪ್ರಯಾಣಿಕರನ್ನು ಸೆಳೆಯುವ ಜೊತೆಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟದ ಪ್ರಮಾಣವನ್ನು ಇಳಿಕೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ನಿತ್ಯ ಬಸ್ ನಲ್ಲಿ ಸಂಚರಿಸುವವರಿಗೆ ಇದರಿಂದ ಸಾಕಷ್ಟು ಅನುಕೂಲವಾಗಿದೆ.

ಎಚ್. ರಾಮನಗೌಡರ, (ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ)

ಕೋವಿಡ್ ಪೂರ್ವದಲ್ಲಿ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ 4,670 ಬಸ್‌ಗಳು ಸಂಚರಿಸುತ್ತಿದ್ದವು. ಈಗ 3,100 ಬಸ್‌ಗಳ ಸಂಚಾರವಿದ್ದು ಸಂಸ್ಥೆಗೆ ನಿತ್ಯ 2.2 ಕೋಟಿ ಆದಾಯ ಬರುತ್ತಿದೆ. ಈ ರೀತಿ ದಿನನಿತ್ಯ ಹಳ್ಳಿಗಳಿಂದ ಬೇರೆ ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಉದ್ಯೋಗಕ್ಕೆ ಬರುವವರಿಗೆ ಪಾಸ್ ಗಳಲ್ಲಿ ವಿನಾಯಿತಿ ನೀಡಿರುವುದಕ್ಕೆ ಸಾರ್ವಜನಿಕ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಂಸ್ಥೆಯವ್ರು ಪಾಸ್ ವ್ಯವಸ್ಥಾ ಮಾಡಿರೋದ್ರಿಂದ ನಂಗ್ ಭಾಳ್ ಅನುಕೂಲ ಆಗೈತಿ. ಕೋವಿಡ್ ನಂತಹ ಈ ಟೈಮ್ ನ್ಯಾಗ ನಂಗ್ ಪಾಸ್ ರಿಯಾಯಿತಿ ರೊಕ್ಕದಾಗ ಪಾಸ್ ಕೊಡ್ತಿರೋದ್ರಿಂದ 1000 ರೂಪಾಯಿ ವರೆಗೂ ಉಳಿತಾಯ ಆಗಾಕತ್ತೈತಿ.

ಈ.ಎಸ್. ಅಮರಗೋಳ, (ಪ್ರಯಾಣಿಕ)

Leave a Reply

Your email address will not be published. Required fields are marked *

You May Also Like

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…