ಶಿರಹಟ್ಟಿ: ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.

ಮಾಯವಾದ ರಸ್ತೆಗಳು, ರಸ್ತೆಗಳಲ್ಲಿ ನಿರ್ಮಾಣವಾದ ದೊಡ್ಡ-ದೊಡ್ಡ ಗುಂಡಿಗಳು, ದುರಸ್ಥಿಯಾಗದ ರಸ್ತೆಯಿಂದ ಜನರ ಸಂಕಷ್ಟ. ಇದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿ ಗ್ರಾಮದ ರಸ್ತೆಗಳ ಕಥೆ. ಜನಪ್ರತಿನಿಧಿಗಳ ನಿರ್ಲಕ್ಷವೇ ಗ್ರಾಮದ ರಸ್ತೆಯ ಈ ಸ್ಥಿತಿಗೆ ಕಾರಣ ಅನ್ನೋದು ಸ್ಥಳೀಯರ ಆಕ್ರೋಶ.

ರಸ್ತೆ ದುರಸ್ಥಿ ಮಾಡದ ಕಾರಣ ರಸ್ತೆಯಲ್ಲಿ ತಗ್ಗು ಗುಂಡಿಗಳು ನಿರ್ಮಾಣವಾಗಿ ವೃದ್ಧರು, ಮಕ್ಕಳು ಓಡಾಡಲು ಪರಿತಪಿಸುವಂತಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ರಸ್ತೆ ದುರಸ್ಥಿಗೆ ಮುಂದಾಗಬೇಕು.

ಆಂಜನೇಯ, ಕನ್ನಡಪರ ಸಂಘನೆ ಕಾರ್ಯಕರ್ತ.

ರಸ್ತೆಗಳಲ್ಲಿ ನಿರ್ಮಾಣವಾದ ತಗ್ಗು ಗುಂಡಿಗಳಿಂದ ನೀರು ಸಂಗ್ರಹವಾಗಿ ಸಾಂಕ್ರಾಮಿಕ ಕಾಯಿಲೆಗೂ ಕಾರಣವಾಗುತ್ತಿದೆ. ಮಳೆ ಬಂದರೆ ಸಾಕು ಕೆಸರು ಗದ್ದೆಯಂತಹ ಸ್ಥಿತಿ ನಿರ್ಮಾಣವಾಗುತ್ತಿದೆ.
ಈ ನಡುವೆ ಮತ್ತೆ ಗ್ರಾಮ ಪಂಚಾಯಿತಿ ಚುನಾವಣೆಗೆ ಜನನಾಯಕರು ತಯಾರಿ ನಡೆಸಿದ್ದಾರೆ. ಅಧಿಕಾರದಲ್ಲಿದ್ದವರು ಇನ್ನಿಲ್ಲದ ಕುಂಟು ನೆಪ ಹೇಳುತ್ತಿದ್ದರೆ, ಅಧಿಕಾರಕ್ಕೆ ಬರುವ ಹುಮ್ಮಸ್ಸಿನಲ್ಲಿರುವವರು ಸ್ವರ್ಗವನ್ನೇ ಭೂಮಿಗೆ ಇಳಿಸುವ ಮಾತನಾಡುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ.

ಈ ಬಗ್ಗೆ ಪ್ರತಿಕ್ರಿಯೇಗಾಗಿ ಸ್ಥಳೀಯ ಗ್ರಾಮ ಪಂಚಾಯತಿ ಪಿಡಿಓ ಅವರನ್ನು ಉತ್ತರಪ್ರಭ ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿತು. ಆದರೆ ಪಿಡಿಓ ಅವರ ಮೊಬೈಲ್ ಸಂಖ್ಯೆ ನಾಟ್ ರಿಚೇಬಲ್ ಆಗಿತ್ತು.

ಈಗಲಾದರೂ ಜನಪ್ರತಿನಿಧಿಗಳು ಈಕಡೆ ಗಮನ ಹರಿಸಬೇಕು. ರಸ್ತೆ ದುರಸ್ಥಿಗೆ ಮುಂದಾಗುವ ಮೂಲಕ ಜನರ ನೆಮ್ಮದಿ ಬದುಕಿಗೆ ಕಾರಣವಾಗಬೇಕು ಎನ್ನುವುದು ನಮ್ಮ ಆಶಯ.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ಗದಗ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾಲೋನಿಗೆಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗೆ  ಅರ್ಜಿ…

ಶಿಶುವಿನ ಜೀವ ಉಳಿಸಿದ ವೈದ್ಯರಿಗೆ ಸಚಿವ ಸಿ .ಸಿ .ಪಾಟೀಲರ ಅಭಿನಂದನೆ

ಉತ್ತರಪ್ರಭ ಸುದ್ದಿಗದಗ: ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ…

ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಛೇರಿ ಸ್ಥಳಾಂತರ

ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್