ಗದಗ: ಇನ್ಮುಂದೆ ನೋ ಪೊಸ್ಟ್ ಆಫೀಸ್ ಓನ್ಲಿ ಬ್ಯಾಂಕ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಗದಗನಲ್ಲಿ ಮಾತನಾಡಿದ ಅವರು, ಈಗಾಗಲೇ ವೃದ್ಧಾಪ್ಯ, ವಿಕಲಚೇತನ, ವಿಧವಾ ಸೇರಿದಂತೆ ಪಿಂಚಣಿಗೆ 7000 ಕೋಟಿ ಹಣ ನೀಡಲಾಗುತ್ತಿದೆ. ಇದರಲ್ಲಿ ಅಂದಾಜು 700 ಕೋಟಿಯಷ್ಟು ಹಣ ದುರುಪಯೋಗವಾಗುತ್ತಿದೆ. ಈ‌ ನಿಟ್ಟಿನಲ್ಲಿ ಪೋಲಾಗುತ್ತಿರುವ ಸರ್ಕಾರದ ಹಣ ತಡೆಗಟ್ಟಲು ಇನ್ಮುಂದೆ ಪಿಂಚಣಿದಾರರ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಜಮೆ ಎಂದರು.

ಅರ್ಜಿ ಪಡೆಯದೇ ಪಿಂಚಣಿ ತಲುಪಿಸುವ ಕಾರ್ಯ

ಆಧಾರ ಕಾರ್ಡ್, ರೇಷನ್ ಕಾರ್ಡ್ ಆಧಾರದ ಮೇಲೆ ವಯಸ್ಸು ದೃಢಪಡಿಸಿಕೊಂಡು 60 ವರ್ಷ ಆದವರ ವಿವರ ಪಡೆದು ಪಿಂಚಣಿ ಕೊಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಯೋಜನೆ ತಲುಪಿಸುವ ಕಾರ್ಯ ಸರ್ಕಾರ ಮಾಡಲು ಮುಂದಾಗಿದೆ. ಇದರಿಂದ ಯಾವುದೇ ಅರ್ಜಿ ಪಡೆಯದೇ ಪಿಂಚಣಿ ತಲುಪಿಸುವ ಜೊತೆಗೆ ಯೋಜನೆ ದುರ್ಬಳಕೆಗೂ ಕಡಿವಾಣ ಹಾಕಿದಂತಾಗುತ್ತದೆ ಎಂದರು.

ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್ ಜಮೀನು

ಇದೇ ವೇಳೆ ಬಗರ್ ಹುಕುಂ ಸಾಗುವಳಿ ಬಗ್ಗೆ ಮಾತನಾಡಿ, ರಾಜ್ಯದಲ್ಲಿ 9 ಲಕ್ಷ ಹೆಕ್ಟೇರ್ ಜಮೀನಿನ ಬಗ್ಗೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಮದ್ಯೆ ವಿವಾದ ಇದೆ. ಇದರಲ್ಲಿ ಈಗಾಗಲೇ 6 ಲಕ್ಷ ಹೆಕ್ಟೇರ್ ಕಂದಾಯ ಇಲಾಖೆಗೆ ಜಮೀನು ವಾಪಸ್ ಮರಳಲಿದೆ ಎಂದರು.

ಕೇಳಿದ್ದು 8071 ಕೋಟಿ, ಒಪ್ಪಿದ್ದು 628 ಕೋಟಿ

ಈಗಾಗಲೇ ರಾಜ್ಯದಲ್ಲಿ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಈ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರ 9 ಎನ್.ಡಿ.ಆರ್.ಎಫ್ ತಂಡಗಳನ್ನು ಕಳುಹಿಸಿದೆ. ಈಗಾಗಲೇ ಪ್ರವಾಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 395 ಕೋಟಿ ಎರಡನೇ ಕಂತಿನ ಹಣ ನೀಡಿದೆ. ರಾಜ್ಯದಲ್ಲಿ ಪ್ರವಾಹಕ್ಕೆ ಪರಿಹಾರವಾಗಿ ರಾಜ್ಯ ಸರ್ಕಾರ 8071 ಕೋಟಿ ಹಣಕಾಸಿನ ನೆರವು ನೀಡುವಂತೆ ಕೇಂದ್ರಕ್ಕೆ‌ ಕೇಳಲಾಗಿತ್ತು. ಆದರೆ ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ 628 ಕೋಟಿ ಮಾತ್ರ ರಾಜ್ಯಕ್ಕೆ ನೆರವು ಸಿಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 3,31,000 ಹೆಕ್ಟೇರ್ ಕೃಷಿ ಭೂಮಿ, 32,976 ಹೆಕ್ಟೇರ್ ತೋಟಗಾರಿಕೆ ಬೆಳೆ ಪ್ರವಾಹದಿಂದ ಹಾನಿಗೀಡಾಗಿದೆ. 10998 ಮನೆಗಳು ಹಾಗೂ 14182 ಕಿ.ಮಿ ರಸ್ತೆ ಹಾನಿಗೀಡಾಗಿದೆ. 1200 ಸೇತುವೆಗಳಿಗೆ ಹಾನಿಯಾಗಿದ್ದು 3168 ಸರ್ಕಾರಿ ಕಟ್ಟಡಗಳಿಗೂ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ನದಿ ಹಿನ್ನಿರಿನಿಂದ ನುಸುಳುತ್ತಿದ್ದಾರೆ ಜನ

ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ.

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.