ಗದಗ: ರಾಜ್ಯ ಸರ್ಕಾರ ಊರಿಗೊಂದು ಸ್ಮಶಾನಕ್ಕೆ ಆದ್ಯತೆ ನೀಡಿದ್ದು, ಈ ಬಗ್ಗೆ ಅನುದಾನದ ವ್ಯವಸ್ಥೆ ಕೂಡ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಗದಗನಲ್ಲಿ ಈ‌ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ 111 ಗ್ರಾಮಗಳಲ್ಲಿ ಸ್ಮಶಾನವಿಲ್ಲ. ಹೀಗಾಗಿ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ಒತ್ತುವರಿಯಾದ ಕಂದಾಯ ಇಲಾಖೆ ಜಮೀನನ್ನು ತೆರವುಗೊಳಿಸಿ ಇಲಾಖೆ ಸುಪರ್ಧಿಗೆ ತೆಗೆದುಕೊಳ್ಳುವಂತೆ ಸೂಚಿಸಿದ್ದು, ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನಕ್ಕೆ 5 ಎಕರೆ ಜಮೀನು ಹಾಗೂ ರೋಣದಲ್ಲಿ‌ ಬೀಜ ನಿಗಮದ ಕಚೇರಿಗೆ 1.20 ಗುಂಟೆ ಜಮೀನು ನೀಡಲಾಗಿದೆ. ಒತ್ತುವರಿ ಜಮೀನನ್ನು ಸ್ವಾಧೀನ ಪಡೆಸಿಕೊಂಡು ಸರ್ಕಾರದ ಇಲಾಖೆಗೆ ಹಂಚಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.
ಜಿಲ್ಲೆಯ ನರಗುಂದ ತಾಲೂಕಿನಲ್ಲಿ -7 ಮತ್ತು ರೋಣ ತಾಲೂಕಿನಲ್ಲಿ 7 ಗ್ರಾಮಗಳು ಪ್ರವಾಹಕ್ಕೆ ಸಿಕ್ಕಿವೆ. ಈವರೆಗೆ ಒಟ್ಟು 338 ಮನೆಗಳಿಗೆ ಹಾನಿಯಾಗಿದ್ದು, 5553 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಇದರಲ್ಲಿ 6254 ಹೆಕ್ಟೇರ್ ತೋಟಾರಿಕೆ ಬೆಳೆ ಹಾನಿಯಾಗಿದ್ದು, ಈಗಾಗಲೇ 7.90ಲಕ್ಷ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗೋವಾದಿಂದ ಬಂದ ಕೂಲಿ ಕಾರ್ಮಿಕ: ಕೊರೊನಾ ಸೋಂಕಿನಿಂದ ಸಾವು!

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ…

ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ

ಭಾರತ: 7 ಲಕ್ಷ ದಾಟಿದ ಪಾಸಿಟಿವ್

ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ…

ಜಕ್ಕಲಿ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ಜಕ್ಕಲಿ ಗ್ರಾಮದ ಎಸ್ಎಜೆಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.