ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಕೆಲ ದಿನಗಳಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ನದಿಯ ನೀರಿನ ಮಟ್ಟವೂ ಹೆಚ್ಚಾಗಿದೆ. ನೀರಿನ ಮಟ್ಟ ಹೆಚ್ಚುತ್ತಿರುವ ಬೆನ್ನಲ್ಲೆ ಸೇತುವೆ ಕುಸಿತ ಜನರಲ್ಲಿ ಆತಂಕ ಸೇಷ್ಟಿಸಿದೆ. ಘಟನೆಯಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ಸೇತುವೆಯಾಗಿದೆ. 2002ರಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಸೇತುವೆ ನಿರ್ಮಿಸಿ 18 ವರ್ಷಗಳಾಗಿವೆಯಷ್ಟೇ. ಆರ್.ಡಿ.ಸಿ.ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ದುರಸ್ಥಿ ಕಾರ್ಯ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.

ರೈತ ಸಂಘ, ಹಸಿರು ಸೇನೆ: ಮಹಿಳಾ ಘಟಕ ಉದ್ಘಾಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ…

ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್!

ಹೈದರಾಬಾದ್ : ನಟ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ಅಹಾರ ವಿತರಣೆ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಹಾಗೂ ದೊಡ್ಡೂರ ಸೂರಣಗಿ ಕೊಂಚಿಗೇರಿ ಸೇರಿ ಗ್ರಾಮೀಣ ಪ್ರದೇಶದಲ್ಲಿ ತೆರಳಿ ಸಿದ್ದಪಡಿಸಿದ ಆಹಾರದ ಬಾಕ್ಸ್ ವಿತರಿಸಿದರು.