ಮುಳಗುಂದ: ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಶೀತಾಲಹರಿ ವ್ತಾಪ್ತಿಯಲ್ಲಿ 10ಕ್ಕೂ ಹೆಚ್ಚು ಕ್ರಷರಗಳಿದ್ದು ಸುತ್ತಮುತ್ತಲ ನೂರಾರು ಎಕರೆ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತದೆ. ಕಲ್ಲಿನ ಗುಡ್ಡಗಳನ್ನ ಸ್ಪೋಟಿಸಲು ಪರವಾನಿಗೆ ಇಲ್ಲದೇ ಸ್ಪೋಟಕ‌ ವಸ್ತಗಳ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ತಿಳಿದು ಪೋಲಿಸರು ದಾಳಿ ನಡೆಸಿದರು.

ಈ ಕುರಿತು ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಯತಿಶ್‌ ಎನ್‌ ಮಾಹಿತಿ ನೀಡಿ, ಅಪಾಯಕಾರಿ ಸ್ಪೋಟಕ ವಸ್ತುಗಳನ್ನ ಅಕ್ರಮವಾಗಿ ಸಂಗ್ರಹಿಸುವದು ಅಪರಾದ, ಘಟನೆಗೆ ಸಂಬಂಧಿಸಿದಂತೆ ಮುಳಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಂದು ತಿಳಿಸಿದರು.

ಈ ವೇಳೆ 625 ಎಲೆಕ್ಟ್ರಿಕ್ ಡೆಟೋನೇಟರ್, 214 ಜೆಲಿಟಿನ್‌ ಟ್ಯೂಬ್, 10 ಕೆ.ಜಿ ಅಮೊನಿಯಂ ನೈಟ್ರೇಟ್‌ ಮತ್ತು 3 ಮೆಗ್ಗರ್‌ ಬಾಕ್ಸ ಜಪ್ತಿ ಮಾಡಿದ್ದಾರೆ. ಆರೋಪಿತರ ಪೈಕಿ ಹನಮಂತಪ್ಪ ಯರೆವಡ್ಡ (28) ನನ್ನ ಬಂಧಿಸಲಾಗಿದ್ದು ಓರ್ವ ನಾಪತ್ತೆಯಾಗಿದ್ದಾನೆ.

.

Leave a Reply

Your email address will not be published. Required fields are marked *

You May Also Like

ಪಕ್ಷಕ್ಕೆ ಕೆಲವರಿಂದ ಮುಜುಗರ ಉಂಟಾಗುತ್ತಿದೆ: ಶಾಸಕ ರಾಮದಾಸ್

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00…