ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ.

ಕೊರೊನಾ ಮಹಾಮಾರಿಯಿಂದಾಗಿ ಹಲವು ದಿನಗಳಿಂದಲೂ ಐಸಿಯುನಲ್ಲಿ ಚಿಕಿತ್ಸೆ ಪಡುತ್ತಿದ್ದ ಎಸ್ ಪಿಬಿ ಈ ಲೋಕ ಬಿಟ್ಟು ತೆರಳಿದ್ದಾರೆ. ಸೋಂಕಿನಿಂದಾಗಿ ಅವರು ಆಗಷ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಶೀತ ಮತ್ತು ಜ್ವರದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಮಾಡಿದ್ದ ವೈದ್ಯರು ಅವರಲ್ಲಿ ಸೋಂಕು ಇರುವುದಾಗಿ ದೃಢಪಡಿಸಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರಿಳಿತ ಕಂಡು ಬರಲು ಪ್ರಾರಂಭವಾಯಿತು.

ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. 1946ರ ಜೂ. 4ರಂದು ಎಸ್ ಪಿಬಿ ಜನಿಸಿದ್ದಾರೆ. ಅವರು ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾ.ಪಂ ವ್ಯಾಪ್ತಿಯಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ನಿಯೋಜನೆ/ವರ್ಗಾವಣೆ ಮಾಡುವಂತಿಲ್ಲ

ಉತ್ತರಪ್ರಭ ಸುದ್ದಿಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ…

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಗಣೇಶ ಸಂಭ್ರಮ- ಸಾಂಸ್ಕೃತಿಕ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ಇಲ್ಲಿನ ವಿವಿಧ ಬಡಾವಣೆಯಲ್ಲಿ ಗಣೇಶ ಉತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಲ ಗಜಾನನ ಯುವಕ…

Pinup казино приветственный бонус, кэшбэк и продуманная система лояльности

Content Депозит и вывод выигрыша в Пин Ап Вход в аккаунт на…