ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ.

ಕೊರೊನಾ ಮಹಾಮಾರಿಯಿಂದಾಗಿ ಹಲವು ದಿನಗಳಿಂದಲೂ ಐಸಿಯುನಲ್ಲಿ ಚಿಕಿತ್ಸೆ ಪಡುತ್ತಿದ್ದ ಎಸ್ ಪಿಬಿ ಈ ಲೋಕ ಬಿಟ್ಟು ತೆರಳಿದ್ದಾರೆ. ಸೋಂಕಿನಿಂದಾಗಿ ಅವರು ಆಗಷ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಶೀತ ಮತ್ತು ಜ್ವರದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಮಾಡಿದ್ದ ವೈದ್ಯರು ಅವರಲ್ಲಿ ಸೋಂಕು ಇರುವುದಾಗಿ ದೃಢಪಡಿಸಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರಿಳಿತ ಕಂಡು ಬರಲು ಪ್ರಾರಂಭವಾಯಿತು.

ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. 1946ರ ಜೂ. 4ರಂದು ಎಸ್ ಪಿಬಿ ಜನಿಸಿದ್ದಾರೆ. ಅವರು ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…

ದುಷ್ಕರ್ಮಿಗಳ ದುಷ್ಕೃತ್ಯಕ್ಕೆ ಕೈಸೇರಬೇಕಿದ್ದ ಲಕ್ಷಾಂತರ ಆದಾಯದ ಬೆಳೆ ನಾಶ ನಾಶ!

ರೈತರಿಗೆ ಭೂತಾಯಿಯೇ ಎಲ್ಲವೂ. ಆದರೆ ಭೂತಾಯಿಯನ್ನು ನಂಬಿ ಇನ್ನೇನು ಮೆಣಸಿನಕಾಯಿ, ಈರುಳ್ಳಿ ಬೆಳೆ ಕೈಸೇರುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದ ಅನ್ನದಾತನಿಗೆ ಬುಧುವಾರದ ಬೆಳಕು ಆಘಾತದ ಸುದ್ದಿಯನ್ನು ಹೊತ್ತು ತಂದಿತ್ತು.

ರಾಜ್ಯದಲ್ಲಿಂದು 2496 ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಏರಿಕೆ: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 2496 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44077 ಕ್ಕೆ ಏರಿಕೆಯಾದಂತಾಗಿದೆ.