ಮಸ್ಕಿ: ಕಾರ್ಮಿಕ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಇಲ್ಲಿನ ಕರ್ನಾಟಕ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಕೆಆರ್ ಎಸ್. ರೈತಪರ(ಹಸಿರು ಸೇನೆ) ಸಂಘ, ಹಾಗೂ ಚಲವಾದಿ ಮಹಾಸಭಾ ಸಂಘಟನೆ ಮುಖಂಡರು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು ಕೆಆರ್ ಎಸ್. ತಾಲೂಕ ಅಧ್ಯಕ್ಷ ಸಂತೋಷ ಹಿರೇದಿನ್ನಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರ ಜನ ವಿರೋಧಿ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದಾರೆ. ರೈತರ ದಲಿತರ ಮಹಿಳೆಯರ ವಿದ್ಯಾರ್ಥಿ ಹಾಗೂ ಯುವ ಜನರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ.

ಕೇಂದ್ರ ಮತ್ತು ರಾಜ್ಯ ಸರಕಾರ ಲೋಕಸಭೆ. ವಿಧಾನಸಭೆಗಳನ್ನು ಬದಿಗಿಟ್ಟು ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಪಾಸ್ ಮಾಡಿಕೊಂಡಿದೆ. ರೈತರ ಉತ್ಪನ್ನಗಳ ವ್ಯಾಪಾರ ಮಸೂದೆ. ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳ ರೈತರ ಒಪ್ಪಿಗೆ ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ ಜಾರಿಗೆ ತರಲು ಮುಂದಾಗಿ ರೈತರ ಬೆನ್ನಿಗೆ ಚೂರಿ ಹಾಕಲು ಹೊರಟಿದ್ದಾರೆ. ವಿರೋಧ ಪಕ್ಷದ ಸಂಸದರನ್ನು ಹೊರ ಹಾಕಿ 44 ಕಾರ್ಮಿಕ ತಿದ್ದುಪಡಿಗಳನ್ನು 4ಕೋಡ್ ಗಳನ್ನಾಗಿ ತಿದ್ದುಪಡಿ ಮಾಡಿ ನಾನಾ ವಿದೇಯಕಗಳನ್ನು ಅಂಗಿಕರಿಸಿ ಕಾರ್ಪೋರೆಟ್ ಕಂಪನಿಗಳಿಗೆ ಅಮಾಯಕ ಜನರಿಗೆ ಬಲಿ ಕೊಡಲು ಮುಂದಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಾರ್ಮಿಕರು ಹೋರಾಟ ಮಾಡುತ್ತಿದ್ದರು. ಸೌಜನ್ಯಕಾದರೂ ರೈತ ರೊಂದಿಗೆ ಚರ್ಚೆ ಮಾಡಲು ಸರಕಾರ ಮುಂದಾಗದಿರುವುದು ಖಂಡನೀಯವಾಗಿದೆ ಎಂದು ದೂರಿದರು.

ಸಿಎಂ‌ ಬಿಎಸ್ ವೈ ಸರಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ಮಸೂದೆಗಳನ್ನು ಈಗಾಗಲೇ ಅನುಮೋದನೆ ಪಡೆದುಕೊಂಡಿದೆ. ಭೂ ಸಂಭಂದಿಸಿದ ಸುಗ್ರಿವಾಜ್ಞೆಗಳಿಗೆ ಅಂಗೀಕಾರ ಪಡೆಯಲು ತಯಾರು ನಡೆಸಿದೆ. ವಿಧಾನ ಪರಿಷತ್ ನಲ್ಲಿ ಬಹುಮತ ಇರುವ ಕಾರಣದಿಂದ ಇದನ್ನು ಸೋಲಿಸಲು ಮುಂದಾಗಬೇಕು. ಈ ಹೊಸ ತಿದ್ದುಪಡಿ ಕಾಯ್ದೆಯಿಂದ ಶೇ.95ರಷ್ಟು ಜನ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ಕಾಯ್ದೆಗಳು ಬ್ರಿಟೀಷರ ಆಡಳಿತವನ್ನು ಮೀರಿಸುತ್ತಿದೆ. ಈ ಕಾಯ್ದೆ ಹಿಂಪಡೆಯಲು ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಾರುತಿ ಜಿನ್ನಾಪೂರ, ಅಮರೇಶ ಪಾಮನಕೆಲ್ಲೂರ, ವಿಜಯ ಬಡೀಗೇರ್,ತಾಯಪ್ಪ ಮಸ್ಕಿ, ಮಲ್ಲಪ್ಪ ಗೋನಾಳ,ತಿಮ್ಮಣ್ಣ ಭೋವಿ, ಶಂಕ್ರಣ್ಣ ಕಟಿಗೆ ಅಡ್ಡೆ, ಹುಚ್ಚರೆಡ್ಡಿ ಹೀರೆದಿನ್ನಿ, ಅಮರೇಶ ಹೋಗಾರ ಸೇರಿದಂತೆ ಅನೇಕ ರೈತ ಮುಖಂಡರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಕೆಂಪುರಾಜನಿಗೆ ಡಿಮ್ಯಾಂಡಪ್ಪೂ..ಡಿಮ್ಯಾಂಡು! ಬೆಳೆ ಇತ್ತು ಬೆಲೆ ಇರಲಿಲ್ಲ, ಈಗ ಬೆಳೆ ಇಲ್ಲ ಬೆಲೆ ಇದೆ…!

ಸುರೇಶ್ ಎಸ್.ಲಮಾಣಿ ಲಕ್ಷ್ಮೇಶ್ವರ: ಅತಿವೃಷ್ಟಿ ಮತ್ತು ಅನಾವೃಷ್ಟಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಜೀವನದುದ್ದಕ್ಕೂ ಕಂಬದ ಪೆಟ್ಟು…

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.