ಮಸ್ಕಿ: ಕಾರ್ಮಿಕ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಇಲ್ಲಿನ ಕರ್ನಾಟಕ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಕೆಆರ್ ಎಸ್. ರೈತಪರ(ಹಸಿರು ಸೇನೆ) ಸಂಘ, ಹಾಗೂ ಚಲವಾದಿ ಮಹಾಸಭಾ ಸಂಘಟನೆ ಮುಖಂಡರು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು ಕೆಆರ್ ಎಸ್. ತಾಲೂಕ ಅಧ್ಯಕ್ಷ ಸಂತೋಷ ಹಿರೇದಿನ್ನಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರ ಜನ ವಿರೋಧಿ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದಾರೆ. ರೈತರ ದಲಿತರ ಮಹಿಳೆಯರ ವಿದ್ಯಾರ್ಥಿ ಹಾಗೂ ಯುವ ಜನರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ.

ಕೇಂದ್ರ ಮತ್ತು ರಾಜ್ಯ ಸರಕಾರ ಲೋಕಸಭೆ. ವಿಧಾನಸಭೆಗಳನ್ನು ಬದಿಗಿಟ್ಟು ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಪಾಸ್ ಮಾಡಿಕೊಂಡಿದೆ. ರೈತರ ಉತ್ಪನ್ನಗಳ ವ್ಯಾಪಾರ ಮಸೂದೆ. ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳ ರೈತರ ಒಪ್ಪಿಗೆ ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ ಜಾರಿಗೆ ತರಲು ಮುಂದಾಗಿ ರೈತರ ಬೆನ್ನಿಗೆ ಚೂರಿ ಹಾಕಲು ಹೊರಟಿದ್ದಾರೆ. ವಿರೋಧ ಪಕ್ಷದ ಸಂಸದರನ್ನು ಹೊರ ಹಾಕಿ 44 ಕಾರ್ಮಿಕ ತಿದ್ದುಪಡಿಗಳನ್ನು 4ಕೋಡ್ ಗಳನ್ನಾಗಿ ತಿದ್ದುಪಡಿ ಮಾಡಿ ನಾನಾ ವಿದೇಯಕಗಳನ್ನು ಅಂಗಿಕರಿಸಿ ಕಾರ್ಪೋರೆಟ್ ಕಂಪನಿಗಳಿಗೆ ಅಮಾಯಕ ಜನರಿಗೆ ಬಲಿ ಕೊಡಲು ಮುಂದಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಾರ್ಮಿಕರು ಹೋರಾಟ ಮಾಡುತ್ತಿದ್ದರು. ಸೌಜನ್ಯಕಾದರೂ ರೈತ ರೊಂದಿಗೆ ಚರ್ಚೆ ಮಾಡಲು ಸರಕಾರ ಮುಂದಾಗದಿರುವುದು ಖಂಡನೀಯವಾಗಿದೆ ಎಂದು ದೂರಿದರು.

ಸಿಎಂ‌ ಬಿಎಸ್ ವೈ ಸರಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ಮಸೂದೆಗಳನ್ನು ಈಗಾಗಲೇ ಅನುಮೋದನೆ ಪಡೆದುಕೊಂಡಿದೆ. ಭೂ ಸಂಭಂದಿಸಿದ ಸುಗ್ರಿವಾಜ್ಞೆಗಳಿಗೆ ಅಂಗೀಕಾರ ಪಡೆಯಲು ತಯಾರು ನಡೆಸಿದೆ. ವಿಧಾನ ಪರಿಷತ್ ನಲ್ಲಿ ಬಹುಮತ ಇರುವ ಕಾರಣದಿಂದ ಇದನ್ನು ಸೋಲಿಸಲು ಮುಂದಾಗಬೇಕು. ಈ ಹೊಸ ತಿದ್ದುಪಡಿ ಕಾಯ್ದೆಯಿಂದ ಶೇ.95ರಷ್ಟು ಜನ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ಕಾಯ್ದೆಗಳು ಬ್ರಿಟೀಷರ ಆಡಳಿತವನ್ನು ಮೀರಿಸುತ್ತಿದೆ. ಈ ಕಾಯ್ದೆ ಹಿಂಪಡೆಯಲು ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಾರುತಿ ಜಿನ್ನಾಪೂರ, ಅಮರೇಶ ಪಾಮನಕೆಲ್ಲೂರ, ವಿಜಯ ಬಡೀಗೇರ್,ತಾಯಪ್ಪ ಮಸ್ಕಿ, ಮಲ್ಲಪ್ಪ ಗೋನಾಳ,ತಿಮ್ಮಣ್ಣ ಭೋವಿ, ಶಂಕ್ರಣ್ಣ ಕಟಿಗೆ ಅಡ್ಡೆ, ಹುಚ್ಚರೆಡ್ಡಿ ಹೀರೆದಿನ್ನಿ, ಅಮರೇಶ ಹೋಗಾರ ಸೇರಿದಂತೆ ಅನೇಕ ರೈತ ಮುಖಂಡರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಶಿಶುವಿನ ಜೀವ ಉಳಿಸಿದ ವೈದ್ಯರಿಗೆ ಸಚಿವ ಸಿ .ಸಿ .ಪಾಟೀಲರ ಅಭಿನಂದನೆ

ಉತ್ತರಪ್ರಭ ಸುದ್ದಿಗದಗ: ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ…

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.