ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ.

ಕೊರೊನಾ ಮಹಾಮಾರಿಯಿಂದಾಗಿ ಹಲವು ದಿನಗಳಿಂದಲೂ ಐಸಿಯುನಲ್ಲಿ ಚಿಕಿತ್ಸೆ ಪಡುತ್ತಿದ್ದ ಎಸ್ ಪಿಬಿ ಈ ಲೋಕ ಬಿಟ್ಟು ತೆರಳಿದ್ದಾರೆ. ಸೋಂಕಿನಿಂದಾಗಿ ಅವರು ಆಗಷ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಶೀತ ಮತ್ತು ಜ್ವರದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಮಾಡಿದ್ದ ವೈದ್ಯರು ಅವರಲ್ಲಿ ಸೋಂಕು ಇರುವುದಾಗಿ ದೃಢಪಡಿಸಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರಿಳಿತ ಕಂಡು ಬರಲು ಪ್ರಾರಂಭವಾಯಿತು.

ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. 1946ರ ಜೂ. 4ರಂದು ಎಸ್ ಪಿಬಿ ಜನಿಸಿದ್ದಾರೆ. ಅವರು ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ವಧರ್ಮ, ಜಾತಿಯ ಬೆಂಬಲ

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಕ್ಕೊತ್ತಾಯಕ್ಕಾಗಿ ಪಟ್ಟಣದಲ್ಲಿ ಬುಧವಾರ ನಡೆದ ಬೃಹತ್ ಹೋರಾಟದ ಮೆರವಣಿಗೆಯಲ್ಲಿ ತಾಲ್ಲೂಕಿನ ಮುಸ್ಲಿಂ, ಜೈನ, ಕ್ರಿಶ್ಚಿಯನ್, ವೀರಶೈವ ಲಿಂಗಾಯತ, ಕುರುಬ, ನಾಯಕ ಸೇರಿ ಎಲ್ಲಾ ಧರ್ಮ, ಜಾತಿಯ ಮುಖಂಡರು ಭಾಗವಹಿಸಿ ದೇವಾಂಗ ಸಮಾಜಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸೀತಾಲಹರಿಯ ಸುಪರ್ ಸ್ಪ್ರೆಡರ್ ಯಾರು?: ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು!

ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.