ಅಬುಧಾಬಿ : ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಎರಡು ಸೋಲುಗಳನ್ನು ಕಾಣುತ್ತಿದ್ದಂತೆ ಕೋಚ್ ಗೆ ತಲೆನೋವು ಶುರುವಾಗಿದೆ. ಸುರೇಶ್ ರೈನಾ ಮತ್ತು ಅಂಬಾಟಿ ರಾಯುಡು ಅವರು ಅನುಪಸ್ಥಿತಿ ಕಾಡುತ್ತಿದೆ ಎಂದು ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ಧೋನಿ ನೇತೃತ್ವದ ತಂಡ ತೀವ್ರ ನಿರಾಸೆ ಪ್ರದರ್ಶಿಸುತ್ತಿದೆ. ಮೂರು ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ತಂಡ, ಮೊದಲ ಪಂದ್ಯ ಬಿಟ್ಟರೆ ಉಳಿದ ಎರಡು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹೀಗಾಗಿ ತಂಡದ ಬಗ್ಗೆ ಮಾತನಾಡಿದ್ದಾರೆ. 

ಪ್ರಸಕ್ತ ಸಾಲಿನ ಟೂರ್ನಿಯಲ್ಲಿ ನಾವು ಕೀ ಪ್ಲೇಯರ್ಸ್ ಅನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಬ್ಯಾಲೆನ್ಸ್ ಮಾಡುವುದು ಕಷ್ಟವಾಗುತ್ತಿದೆ. ರೈನಾ, ರಾಯುಡು ಅವರು ಇಲ್ಲದೇ ಬ್ಯಾಟಿಂಗ್ ಕಷ್ಟವಾಗುತ್ತಿದೆ. ಈ ಮೂಲಕ ಟೂರ್ನಿಯ ಆರಂಭದಲ್ಲಿಯೇ ಬ್ಯಾಟಿಂಗ್ ಕ್ರಮವನ್ನು ಸಿದ್ಧ ಮಾಡಿಕೊಳ್ಳುತ್ತಿದ್ದೇವೆ ಎಂದು ಫ್ಲೆಮಿಂಗ್ ತಿಳಿಸಿದ್ದಾರೆ.

ಟಾಪ್ ಆರ್ಡರ್ ನಲ್ಲಿ ಒಳ್ಳೆಯ ಆಟಗಾರರು ಮಿಸ್ ಆಗಿದ್ದಾರೆ. ಹೀಗಾಗಿ ಲೈನ್ ಆಫ್ ಸರಿ ಹೊಂದುತ್ತಿಲ್ಲ. ಮುಂದಿನ ಪಂದ್ಯಕ್ಕೆ ಇನ್ನೂ ಆರು ದಿನ ಬಾಕಿಯಿದ್ದು, ನಾವು ಉತ್ತಮ ಆಟಗಾರರು ಮತ್ತು ತಂಡದೊಂದಿಗೆ ಮತ್ತ ಲಯ ಕಂಡುಕೊಳ್ಳಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 

ಸುರೇಶ್ ರೈನಾ ಅವರು ವೈಯಕ್ತಿಕ ಕಾರಣದಿಂದ ಟೂರ್ನಿಯಿಂದ ಹೊರ ಹೋಗಿದ್ದರೆ, ಅಂಬಾಟಿ ರಾಯುಡು ಅವರು ಕೂಡ ಗಾಯದ ಸಮಸ್ಯೆಯಿಂದ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡ  ಟೂರ್ನಿಯಿಂದ ಹೊರ ಉಳಿದಿದ್ದಾರೆ.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಬಂದ ಡೆಲ್ಲಿ ಕ್ಯಾಪಿಟಲ್ ತಂಡ ವು 20 ಓವರ್ ಗಳಲ್ಲಿ 175 ರನ್ ಟಾರ್ಗೆಟ್ ನೀಡಿತ್ತು. ಕೇವಲ 131 ಗಳಿಸಿ ಟೂರ್ನಿಯಲ್ಲಿ ಎರಡನೇ ಸೋಲನ್ನು ಚೆನ್ನೈ ಕಂಡಿತ್ತು. 

Leave a Reply

Your email address will not be published. Required fields are marked *

You May Also Like

ಗೆಲ್ಲಲು ಒಂದು ರನ್ ಬೇಕಿದ್ದರೂ ಕೊಹ್ಲಿ ಓಡಿದ್ದು ಎರಡು ರನ್…ಏಕೆ?

ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಆರ್‌ ಸಿಬಿ ನಾಯಕ ವಿರಾಟ್‌ ಕೊಹ್ಲಿ ಅವರು ಗೆಲ್ಲಲು ಒಂದು ರನ್ ಬೇಕಿದ್ದರೂ 2 ರನ್ ಗಳನ್ನು ಓಡಿದ್ದಕ್ಕೆ ಜನರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ಇಂದು ಬಿಸಿಸಿಐ ಸಭೆ: ಐಪಿಎಲ್ ಮತ್ತೆ ಮೈದಾನಕ್ಕೆ?

ಕೋರೊನಾ ಬಿಕ್ಕಟ್ಟಿನ ಕಾರಣಕ್ಕೆ ಕ್ರಿಕೆಟ್ ಮಲಗಿದೆ. ತಿಂಗಳುಗಳ ನಂತರ ಇಂದು ಬಿಸಿಸಿಐ ಮಹತ್ವದ ಸಭೆ ನಡೆಸುತ್ತಿದ್ದು,…

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…