ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಅವರು ಇಂದು ಬೆಳಿಗ್ಗೆ 9ಕ್ಕೆ ಉತ್ತರ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಮಂಗಳೂರು ಉಪ ನಗರ ಉಪ ಪೊಲೀಸ್ ಆಯುಕ್ತ ವಿನಯ ಗಾಂವ್ಕರ್ ನೇತೃತ್ವದಲ್ಲಿ ಸಿಸಿಬಿ ಇನ್ಸಪೆಕ್ಟರ್ ಶಿವಪ್ರಕಾಶ್ ವಿಚಾರಣೆ ನಡೆಸಿದರು.

ಆದರೆ, ಮಾಧ್ಯಮ ಸೇರಿದಂತೆ ಅಭಿಮಾನಿಗಳಿಂದಾಗಿ ಹೆಚ್ಚಿನ ಗದ್ದಲ ಸೃಷ್ಟಿಯಾಗಬಹುದು ಎಂಬ ಕಾರಣಕ್ಕೆ ಪೊಲೀಸರು ವಿಚಾರಣೆ ಸ್ಥಳವನ್ನು ಗೌಪ್ಯವಾಗಿಟ್ಟಿದ್ದರು. ನಗರದಲ್ಲಿ ನಡೆಸದೆ ಹೊರಭಾಗದ ಮಂಗಳೂರು ಉತ್ತರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಸುತ್ತಿದ್ದಾರೆ.

ಶುಕ್ರವಾರವೇ ಅನುಶ್ರೀ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಪೊಲೀಸರು ನಿನ್ನೆ ವಿಚಾರಣೆ ನಡೆಸಲಿಲ್ಲ. ಹೀಗಾಗಿ ಅವರ ವಿಚಾರಣೆ ಇಂದು ನಡೆಯಿತು. ನಿನ್ನೆಯೇ ಮಂಗಳೂರಿಗೆ ಆಗಮಿಸಿದ್ದ ಅನುಶ್ರೀ ಅವರ ಕುಟುಂಬದ ಜೊತೆ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೇ, ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದರು. 

Leave a Reply

Your email address will not be published. Required fields are marked *

You May Also Like

ಪ್ರಧಾನಿಯ ಮನ್ ಕಿ ಬಾತ್ ಏನು?

ದೆಹಲಿ: ಇಂದು ಪ್ರದಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನ ಮಾಸಿಕ ಸಂಚಿಕೆಯಲ್ಲಿ…

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ

ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ.…