ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಅವರು ಇಂದು ಬೆಳಿಗ್ಗೆ 9ಕ್ಕೆ ಉತ್ತರ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಮಂಗಳೂರು ಉಪ ನಗರ ಉಪ ಪೊಲೀಸ್ ಆಯುಕ್ತ ವಿನಯ ಗಾಂವ್ಕರ್ ನೇತೃತ್ವದಲ್ಲಿ ಸಿಸಿಬಿ ಇನ್ಸಪೆಕ್ಟರ್ ಶಿವಪ್ರಕಾಶ್ ವಿಚಾರಣೆ ನಡೆಸಿದರು.

ಆದರೆ, ಮಾಧ್ಯಮ ಸೇರಿದಂತೆ ಅಭಿಮಾನಿಗಳಿಂದಾಗಿ ಹೆಚ್ಚಿನ ಗದ್ದಲ ಸೃಷ್ಟಿಯಾಗಬಹುದು ಎಂಬ ಕಾರಣಕ್ಕೆ ಪೊಲೀಸರು ವಿಚಾರಣೆ ಸ್ಥಳವನ್ನು ಗೌಪ್ಯವಾಗಿಟ್ಟಿದ್ದರು. ನಗರದಲ್ಲಿ ನಡೆಸದೆ ಹೊರಭಾಗದ ಮಂಗಳೂರು ಉತ್ತರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಸುತ್ತಿದ್ದಾರೆ.

ಶುಕ್ರವಾರವೇ ಅನುಶ್ರೀ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಪೊಲೀಸರು ನಿನ್ನೆ ವಿಚಾರಣೆ ನಡೆಸಲಿಲ್ಲ. ಹೀಗಾಗಿ ಅವರ ವಿಚಾರಣೆ ಇಂದು ನಡೆಯಿತು. ನಿನ್ನೆಯೇ ಮಂಗಳೂರಿಗೆ ಆಗಮಿಸಿದ್ದ ಅನುಶ್ರೀ ಅವರ ಕುಟುಂಬದ ಜೊತೆ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೇ, ಡ್ರಗ್ಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದರು. 

Leave a Reply

Your email address will not be published. Required fields are marked *

You May Also Like

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ!

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ…

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.