ಗಜೇಂದ್ರಗಡ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಪಟ್ಟಣದ ಮೈಸೂರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂಗೀತ ಮಾತ್ರಿಕ, ಸಾವಿರಾರು ಹಾಡುಗಳ ಸರದಾರ ಎಸ್. ಪಿ ಬಾಲಸುಬ್ರಮಣ್ಯಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಮಾತನಾಡಿ, ಕೋನ್ಯಾನು ಕೋಟಿ ಅಭಿಮಾನುಗಳು ಎಸ್‌ಪಿಬಿ ಅವರು ಗುಣಮುಖರಾಗಿ ಬರಲಿ ಎಂದು ಹಾರೈಸಿದರೂ ಸಹ ಅಭಿಮಾನಿಗಳ ಹಾರೈಕೆ ಫಲಿಸದೇ, ಸಂಗೀತ ದಿಗ್ಗಜ ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ತೆರಳಿರುವುದು ಬಹು ನಷ್ಟವಾಗಿದೆ ಎಂದರು.

ಎಸ್.ಕೆ ಕವಡಿಮಟ್ಟಿ, ಹೆಚ್.ಆರ್.ಭಜಂತ್ರಿ, ಕೆ.ಜಿ.ಸಂಗಟಿ, ಕಲ್ಲಿಗನೂರ, ಎಂ.ಎಸ್.ಮಕಾನದಾರ, ಎಸ್. ಎಸ್. ನರೇಗಲ್ಲ, ಬಿ.ವಿ.ಮುನವಳ್ಳಿ ಇದ್ದರು.

ಚೈತ್ರಾ ಮೆಲೋಡಿಸ್ ತಂಡದಿಂದ:

ಪಟ್ಟಣದ ಚೈತ್ರಾ ಮೆಲೋಡಿಸ್ ಕಲಾ ತಂಡದಿಂದ ಹಿರಿಯ ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಹಿನ್ನಲೆಯಲ್ಲಿ ಎಸ್‌ಪಿಬಿ ಅವರು ಹಾಡಿದ ಗೀತೆಗಳನ್ನು ಹಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಕಲಾವಿದರಾದ ಸಿದ್ದು ಗೌಡರ, ಡಿ.ಜಿ. ಮೋಮಿನ್, ಗೌಸ್ ಗಂಗಾವತಿ, ಬಾಬು ಗೊಡೇಕಾರ, ಜನಾರ್ಧನ ಅಮಟೆ ಇದ್ದರು.

ಬೀದಿಬದಿ ವ್ಯಾಪಾರಸ್ಥರಿಂದ:

ಪಟ್ಟಣದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳು ಒಕ್ಕೂಟ ವತಿಯಿಂದ ಸ್ಥಳೀಯ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಗಾನಕೋಗಿಲೆ ಗಾನಗಂಧರ್ವ ಡಾ. ಎಸ್.ಪಿ ಬಾಲಸುಬ್ರಮಣ್ಯಂರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ತಾಲೂಕ ಅಧ್ಯಕ್ಷ ಭಾಷೆಸಾಬ್ ಕರ್ನಾಚಿ, ರಾಜು ಮಾಂಡ್ರೆ, ಬಾಬು ಗೋಡೆಕಾರ, ಹುಲ್ಲಪ್ಪ ತಳವಾರ, ಬಸು ಚಿನ್ನೂರು, ಇದ್ದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಕಲ್ಲು ಗಣಿಗಾರಿಕೆಯಿಂದ ಬೇಸತ್ತ ಗ್ರಾಮಸ್ಥರು

ಅಧಿಕಾರಿಗಳ ಲೆಕ್ಕದಲ್ಲಿ ಇಲ್ಲಿನ ಕ್ರಷರ್ ಗಳನ್ನು ಬಂದ್ ಮಾಡಲಾಗಿದೆ.ಅಥವಾ ನಿಯಮದಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗಾದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೂ ಗ್ರಾಮಸ್ಥರ ಸಹನೆಯ ಕಟ್ಟೆ ಒಡೆದಾಗ ಹೊಟ್ಟೆಯೊಳಗಿನ ಸಿಟ್ಟು ರಟ್ಟೆಗೆ ಬರಲೇಬೇಕಲ್ಲವೇ. ಶಿರಹಟ್ಟಿ ತಾಲೂಕಿನ ಪರಸಾಪೂರದ ಸುತ್ತಮುತ್ತಲಿನ ಗ್ರಾಮಸ್ಥರ ಪಾಡು ಈಗ ಹಾಗೆ ಆಗಿದೆ.