ಗಜೇಂದ್ರಗಡ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಪಟ್ಟಣದ ಮೈಸೂರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂಗೀತ ಮಾತ್ರಿಕ, ಸಾವಿರಾರು ಹಾಡುಗಳ ಸರದಾರ ಎಸ್. ಪಿ ಬಾಲಸುಬ್ರಮಣ್ಯಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಮಾತನಾಡಿ, ಕೋನ್ಯಾನು ಕೋಟಿ ಅಭಿಮಾನುಗಳು ಎಸ್‌ಪಿಬಿ ಅವರು ಗುಣಮುಖರಾಗಿ ಬರಲಿ ಎಂದು ಹಾರೈಸಿದರೂ ಸಹ ಅಭಿಮಾನಿಗಳ ಹಾರೈಕೆ ಫಲಿಸದೇ, ಸಂಗೀತ ದಿಗ್ಗಜ ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ತೆರಳಿರುವುದು ಬಹು ನಷ್ಟವಾಗಿದೆ ಎಂದರು.

ಎಸ್.ಕೆ ಕವಡಿಮಟ್ಟಿ, ಹೆಚ್.ಆರ್.ಭಜಂತ್ರಿ, ಕೆ.ಜಿ.ಸಂಗಟಿ, ಕಲ್ಲಿಗನೂರ, ಎಂ.ಎಸ್.ಮಕಾನದಾರ, ಎಸ್. ಎಸ್. ನರೇಗಲ್ಲ, ಬಿ.ವಿ.ಮುನವಳ್ಳಿ ಇದ್ದರು.

ಚೈತ್ರಾ ಮೆಲೋಡಿಸ್ ತಂಡದಿಂದ:

ಪಟ್ಟಣದ ಚೈತ್ರಾ ಮೆಲೋಡಿಸ್ ಕಲಾ ತಂಡದಿಂದ ಹಿರಿಯ ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಹಿನ್ನಲೆಯಲ್ಲಿ ಎಸ್‌ಪಿಬಿ ಅವರು ಹಾಡಿದ ಗೀತೆಗಳನ್ನು ಹಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಕಲಾವಿದರಾದ ಸಿದ್ದು ಗೌಡರ, ಡಿ.ಜಿ. ಮೋಮಿನ್, ಗೌಸ್ ಗಂಗಾವತಿ, ಬಾಬು ಗೊಡೇಕಾರ, ಜನಾರ್ಧನ ಅಮಟೆ ಇದ್ದರು.

ಬೀದಿಬದಿ ವ್ಯಾಪಾರಸ್ಥರಿಂದ:

ಪಟ್ಟಣದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳು ಒಕ್ಕೂಟ ವತಿಯಿಂದ ಸ್ಥಳೀಯ ಶ್ರೀ ಕಾಲಕಾಲೇಶ್ವರ ವೃತ್ತದಲ್ಲಿ ಗಾನಕೋಗಿಲೆ ಗಾನಗಂಧರ್ವ ಡಾ. ಎಸ್.ಪಿ ಬಾಲಸುಬ್ರಮಣ್ಯಂರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ತಾಲೂಕ ಅಧ್ಯಕ್ಷ ಭಾಷೆಸಾಬ್ ಕರ್ನಾಚಿ, ರಾಜು ಮಾಂಡ್ರೆ, ಬಾಬು ಗೋಡೆಕಾರ, ಹುಲ್ಲಪ್ಪ ತಳವಾರ, ಬಸು ಚಿನ್ನೂರು, ಇದ್ದರು.

Leave a Reply

Your email address will not be published. Required fields are marked *

You May Also Like

ತಾಲೂಕಾ ಆರೋಗ್ಯ ರಕ್ಷಾ ಸಮಿತಿ ಸಭೆ ನಿರ್ಭಯದಿಂದ ಕಾರ್ಯ ನಿರ್ವಹಿಸಿ: ವೈದ್ಯರಿಗೆ ಶಾಸಕ ರಾಮಣ್ಣ ಅಭಯ

ಉತ್ತರಪ್ರಭ ಸುದ್ದಿಶಿರಹಟ್ಟಿ : ಪ್ರಸ್ತುತ ಕೊರೊನಾ ಸಮಯದಲ್ಲೂ ಹಲವಾರು ಸಮಸ್ಯೆಗಳನ್ನು ಎದುರಿಸಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು…

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಪ್ರಾಮಾಣಿಕ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ: ಹೊಂಬಾಳಿಮಠ

ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು.