ಬೆಂಗಳೂರು: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕೆಗಳಲ್ಲಿ ಈ ಕುರಿತು ವರದಿಯನ್ನು ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದು, ಜಿಎಸ್ಟಿ  ಪರಿಹಾರ ನೀಡಲು ಸಂಗ್ರಹಿಸಲಾಗುವ ಸೆಸ್ ಮೊತ್ತವನ್ನು ಪ್ರತ್ಯೇಕ ಖಾತೆಯಲ್ಲಿ ಠೇವಣಿ ಮಾಡಬೇಕಾಗುತ್ತದೆ. ನಿರ್ದಿಷ್ಠ ವರ್ಷ ವ್ಯಯವಾಗದೆ ಉಳಿದಿರುವ ಹಣವನ್ನು ಮುಂದಿನ ವರ್ಷಕ್ಕೆ ವರ್ಗಾಯಿಸುವ ಅವಕಾಶ ಕೂಡಾ ಇದೆ. ಆದರೆ @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ನಿರ್ದಿಷ್ಟ ಉದ್ದೇಶಕ್ಕೆ ಸಂಗ್ರಹಿಸಲಾಗುವ ಸೆಸ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಾನೂನು ಉಲ್ಲಂಘನೆಯಾಗಿದೆ. ಆದರೆ @narendramodi  ಸರ್ಕಾರ ಜಿ ಎಸ್ ಟಿ ಪರಿಹಾರ ನಿಧಿಯ ಹಣವನ್ನು Consolidated fundಗೆ ವರ್ಗಾಯಿಸಿ ಜಿ ಎಸ್ ಟಿ ಕಾಯ್ದೆಯ ಉಲ್ಲಂಘನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ್ಕೆ 2021ರ ಅಂತ್ಯಕ್ಕೆ ನೀಡಬೇಕಾಗಿರುವ  ಜಿ ಎಸ್ ಟಿ ಪರಿಹಾರ ರೂ. 30,000 ಕೋಟಿ. ಇದನ್ನು ನಿರಾಕರಿಸಿ, ಆರ್ಬಿಐ ನಿಂದ  ಸಾಲ ಎತ್ತಲು ಹೇಳಿರುವ @narendramodi ಸರ್ಕಾರ, ಜಿಎಸ್ಟಿ ಪರಿಹಾರಕ್ಕಾಗಿಯೇ ಸಂಗ್ರಹಿಸಿರುವ ಸೆಸ್ ದುಡ್ಡನ್ನು ತನ್ನ ಖಾಲಿ ಖಜಾನೆಯನ್ನು ತುಂಬಲು ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ಜಿ ಎಸ್ ಟಿ ಪರಿಹಾರಕ್ಕಾಗಿ 2017-18 ಮತ್ತು 2018-19ರಲ್ಲಿ ಕ್ರಮವಾಗಿ ರೂ. 56,146 ಕೋಟಿ ಮತ್ತು 54,275 ಕೋಟಿ ಸೆಸ್ ಹಣ ವರ್ಗಾವಣೆಯಾಗಿದೆ. ಉಳಿಕೆ ಸೆಸ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿರುವ @narendramodi  ಸರ್ಕಾರದ ಈ ಅಕ್ರಮದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

@CMofKarnataka ಅವರೇ, ಅಧಿಕಾರಕ್ಕಿಂತ ರಾಜ್ಯದ ಹಿತ ರಕ್ಷಣೆ ಮುಖ್ಯ. ನಿಮಗೆ ರಾಜ್ಯದ ಜನತೆ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನಮ್ಮ ಜನರ ತೆರಿಗೆ ಹಣದ ಪಾಲನ್ನು ಧೈರ್ಯದಿಂದ ಪ್ರಧಾನಿ @narendramodi ಬಳಿ ಕೇಳಿ. ನಿಮಗೆ ಧೈರ್ಯವಿಲ್ಲದೆ ಇದ್ದರೆ ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು!

ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.