ಬೆಂಗಳೂರು: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕೆಗಳಲ್ಲಿ ಈ ಕುರಿತು ವರದಿಯನ್ನು ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದು, ಜಿಎಸ್ಟಿ  ಪರಿಹಾರ ನೀಡಲು ಸಂಗ್ರಹಿಸಲಾಗುವ ಸೆಸ್ ಮೊತ್ತವನ್ನು ಪ್ರತ್ಯೇಕ ಖಾತೆಯಲ್ಲಿ ಠೇವಣಿ ಮಾಡಬೇಕಾಗುತ್ತದೆ. ನಿರ್ದಿಷ್ಠ ವರ್ಷ ವ್ಯಯವಾಗದೆ ಉಳಿದಿರುವ ಹಣವನ್ನು ಮುಂದಿನ ವರ್ಷಕ್ಕೆ ವರ್ಗಾಯಿಸುವ ಅವಕಾಶ ಕೂಡಾ ಇದೆ. ಆದರೆ @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ನಿರ್ದಿಷ್ಟ ಉದ್ದೇಶಕ್ಕೆ ಸಂಗ್ರಹಿಸಲಾಗುವ ಸೆಸ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಾನೂನು ಉಲ್ಲಂಘನೆಯಾಗಿದೆ. ಆದರೆ @narendramodi  ಸರ್ಕಾರ ಜಿ ಎಸ್ ಟಿ ಪರಿಹಾರ ನಿಧಿಯ ಹಣವನ್ನು Consolidated fundಗೆ ವರ್ಗಾಯಿಸಿ ಜಿ ಎಸ್ ಟಿ ಕಾಯ್ದೆಯ ಉಲ್ಲಂಘನೆ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ್ಕೆ 2021ರ ಅಂತ್ಯಕ್ಕೆ ನೀಡಬೇಕಾಗಿರುವ  ಜಿ ಎಸ್ ಟಿ ಪರಿಹಾರ ರೂ. 30,000 ಕೋಟಿ. ಇದನ್ನು ನಿರಾಕರಿಸಿ, ಆರ್ಬಿಐ ನಿಂದ  ಸಾಲ ಎತ್ತಲು ಹೇಳಿರುವ @narendramodi ಸರ್ಕಾರ, ಜಿಎಸ್ಟಿ ಪರಿಹಾರಕ್ಕಾಗಿಯೇ ಸಂಗ್ರಹಿಸಿರುವ ಸೆಸ್ ದುಡ್ಡನ್ನು ತನ್ನ ಖಾಲಿ ಖಜಾನೆಯನ್ನು ತುಂಬಲು ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ಜಿ ಎಸ್ ಟಿ ಪರಿಹಾರಕ್ಕಾಗಿ 2017-18 ಮತ್ತು 2018-19ರಲ್ಲಿ ಕ್ರಮವಾಗಿ ರೂ. 56,146 ಕೋಟಿ ಮತ್ತು 54,275 ಕೋಟಿ ಸೆಸ್ ಹಣ ವರ್ಗಾವಣೆಯಾಗಿದೆ. ಉಳಿಕೆ ಸೆಸ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿರುವ @narendramodi  ಸರ್ಕಾರದ ಈ ಅಕ್ರಮದ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

@CMofKarnataka ಅವರೇ, ಅಧಿಕಾರಕ್ಕಿಂತ ರಾಜ್ಯದ ಹಿತ ರಕ್ಷಣೆ ಮುಖ್ಯ. ನಿಮಗೆ ರಾಜ್ಯದ ಜನತೆ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನಮ್ಮ ಜನರ ತೆರಿಗೆ ಹಣದ ಪಾಲನ್ನು ಧೈರ್ಯದಿಂದ ಪ್ರಧಾನಿ @narendramodi ಬಳಿ ಕೇಳಿ. ನಿಮಗೆ ಧೈರ್ಯವಿಲ್ಲದೆ ಇದ್ದರೆ ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ನಗರದಲ್ಲಿ ಕ್ಷೌರದ ಅಂಗಡಿಗಳು ಬಂದ್‌ಗೆ ನಿರ್ಧಾರ

ಸವಿತಾ ಸಮಾಜ ಶ್ರೀ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನ ಟ್ರಸ್ಟ್ ಕಮೀಟಿಯ ವತಿಯಿಂದ ಗದಗ-ಬೆಟಗೇರಿಯಲ್ಲಿ ಮಾ.9 ರಂದು ಮಂಗಳವಾರ ಜರುಗಲಿರುವ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನದ 14ನೇ ವಾರ್ಷಿಕೋತ್ಸವ ಕಾರ್ಯಕ್ರಮದ ನಿಮಿತ್ಯ ಪೂರ್ವಭಾವಿ ಸಭೆಯು ಟ್ರಸ್ಟ್ ಕಮೀಟಿ ಅಧ್ಯಕ್ಷ ಕೃಷ್ಣಾ ಎಚ್. ಹಡಪದ ಅಧ್ಯಕ್ಷತೆಯಲ್ಲಿ ಗದಗ-ಬೆಟಗೇರಿ ಸವಿತಾ ಸಮಾಜದ ಮೂರು ದೈವದ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರು ಮತ್ತು ಸಮಾಜದ ಹಿರಿಯರ ಉಪಸ್ಥಿತಿಯಲ್ಲಿ ಜರುಗಿತು.

ಕೋವಿಡ್ ಕೇರ್ ಸೆಂಟರ್ ನಲ್ಲಿ ಕೊಡುವ ಡ್ಯಾನ್ಸ್ ಮಾಡಿದ ಹರ್ಷಿಕಾ-ಭುವನ್

ಬೆಂಗಳೂರು: ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಿದರೆ ಮಾಡಿದ ಸಹಾಯಕ್ಕೆ ಹೆಚ್ಚು ಮಹತ್ವ ಬರುತ್ತದೆ. ಜನರ ಸಂಕಷ್ಟ ಅರಿತ ಸ್ಯಾಂಡಲ್ ವುಡ್ ಸ್ಟಾರ್ ಗಳು ಅವರ ಕೈಲಾದಷ್ಟು ಸೇವೆಗೆ ಮುಂದಾಗಿದ್ದಾರೆ.

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…