ಧಾರವಾಡ: ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ.

ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಹೀಗಾಗಿ ಸೆ.28 ರಂದು ನಡೆಯಬೇಕಿದ್ದ ಎಲ್ಲ ಸ್ನಾತಕ, ದೂರ ಸಂಪರ್ಕ ಶಿಕ್ಷಣ ಅಡಿ ಬರುವ ಬಿ.ಎ, ಬಿಕಾಂ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ದಿನಾಂಕವನ್ನು ಸದ್ಯದಲ್ಲೆ ತಿಳಿಸಲಾಗುವುದು ಎಂದು ಕರ್ನಾಟಕ ವಿವಿಯ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ.ರವೀಂದ್ರನಾಥ್ ಎನ್.ಕದಮ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ನಾಳೆಯಿಂದ ನೀಲಗುಂದ ಗ್ರಾಮದಲ್ಲಿ ಮಹಾಶಿವರಾತ್ರಿ ಉತ್ಸವ

ಐತಿಹಾಸಿಕ, ಆಧ್ಯಾತ್ಮ ನೆಲೆಬೀಡು ನೀಲಗುಂದ ಗ್ರಾಮದ ಗುದ್ನೇಶ್ವರಮಠದ ದಿವ್ಯ ಚೇತನ ಟ್ರಸ್ಟ್ನಿಂದ ಮಾ.9 ರಿಂದ 11 ವರಗೆ ಮಹಾಶಿವರಾತ್ರಿ ಉತ್ಸವ ಹಮ್ಮಿಕೊಂಡಿದ್ದು, ಮೂರು ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಹೇಳಿದರು.

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.