ಚೆನ್ನೈ : ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣಂ ಅವರ ಅಂತ್ಯ ಸಂಸ್ಕಾರ ಇಂದು ಚೆನ್ನೈನ ರೆಡ್‍ ಹಿಲ್ ಫಾರ್ಮ್ ಹೌಸ್ ನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ ಎಸ್ ಪಿಬಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇಂದು ಬೆಳಿಗ್ಗೆ 7 ರಿಂದ 11ರ ವರೆಗೂ ಪಾರ್ಥಿವ ಶರೀರ ವೀಕ್ಷಿಸಬಹುದು.

ತಮ್ಮ ನೆಚ್ಚಿನ ಸಂಗೀತಗಾರನ ಅಂತಿಮ ದರ್ಶನ ಪಡೆಯುವುದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ, ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಲ್ಲಿ ಕುಟುಂಬಸ್ಥರು, ಸಂಬಂಧಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಗಾನ ಗಾರುಡಿಗನ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಶೋಕಾಚರಣೆ ಆಚರಿಸಲಾಯಿತು. ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿತ್ತು. ಕೊರೊನಾ ಮಹಾಮಾರಿಗೆ ಬಲಿಯಾಗಿರುವ ಎಸ್‍ ಪಿಬಿ, ಕಳೆದ 51 ದಿನಗಳಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ವಿಶಪ್ರಾಶನದಿಂದ 62 ಕುರಿಗಳ ಸಾವು

ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ…

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.