ಬೆಂಗಳೂರು : ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ  ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೆ. 28ಕ್ಕೆ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. 

ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳು ನಡೆಯಲಿದ್ದವು. ಸೆ. 28ರ ಬದಲಾಗಿ ಈ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ. ಈ ಬಂದ್ ಗೆ ರೈತ ಸಂಘಟನೆಗಳೊಂದಿಗೆ ಹಲವಾರು ಸಂಘಟನೆಗಳು ಕೂಡ ಕೈ ಜೋಡಿಸಿವೆ. 

ಬಂದ್ ಹಿನ್ನೆಲೆಯಲ್ಲಿ ರೈತ ಮುಖಂಡರ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಿ ಸಂಧಾನ ಮಾಡಿಕೊಳ್ಳಲು ಪ್ರಯತ್ನಿಸಿದರು. ಆದರೆ, ಸಭೆಯಲ್ಲಿ ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರು ಬಂದ್ ಗೆ ಕರೆ ನೀಡಿದ್ದಾರೆ. ಹೀಗಾಗಿ ಸೆ. 28ರಂದು ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಯಾವುದೇ ಬದಲಾವಣೆಗೆ ಒಪ್ಪದ ಕಾರಣ, ರೈತರು ಬಂದ್ ಗೆ ಕರೆ ನೀಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.