ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ರಾಯಚೂರು, ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಳೆರಾಯ ರಜೆ ಪಡೆಯದೆ ಸುರಿಯುತ್ತಿದ್ದಾನೆ. ರಸ್ತೆಗಳೆಲ್ಲ ನದಿಗಳಂತಾಗಿವೆ. ತಗ್ಗು ಪ್ರದೇಶದ ಮನೆಗಳೆಲ್ಲ ಜಲಾವೃತಗೊಂಡಿವೆ. ಬೆಂಬಡಿದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕಲಬುರಗಿಯಲ್ಲಂತೂ ಮಳೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಭೀಮಾ ಹಾಗೂ ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಈಗಾಗಲೇ ಹಲವರು ವಿವಿಧ ಮಳೆರಾಯನ ಅವಾಂತರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಭಾಗದಲ್ಲಿಯೂ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ ಉದ್ದಕ್ಕೂ ಭಾರಿ ಪ್ರಮಾಣದ ನೀರು ಸಮುದ್ರ ಸೇರಿರುವುದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಬೀದರ್ ನಲ್ಲಿ ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. ಲಕ್ಷಾಂತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಯಾದಗಿರಿ – ಸೇಡಂ ಮುಖ್ಯ ರಸ್ತೆ ಸಂಪರ್ಕ ಕಳೆದುಕೊಂಡಿದೆ. ಹೀಗಾಗಿ ಜನ ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಳೆಯ ಅವಾಂತರಕ್ಕೆ ವ್ಯಕ್ತಿಯೊಬ್ಬ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಧಾರವಾಡ, ಬೆಳಗಾವಿಯಲ್ಲಿಯೂ ಕಳೆದ ಎರಡ್ಮೂರು ದನಗಳಿಂದ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಮುದ್ದೇಬಿಹಾಳ, ಬಸವನಬಾಗೇವಾಡಿ, ದೇವರಹಿಪ್ಪರಗಿ, ತಾಳಿಕೋಟಿ ಹಾಗೂ ಸಿಂದಗಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಸಾವಿರಾರು ಹೆಕ್ಟೆರ್ ಬೆಳೆಗಳು ಜಲಾವೃತಗೊಂಡಿದೆ. ಡೋಣಿ ಮತ್ತು ಭೀಮಾ ನದಿ ಮತ್ತೆ ಉಕ್ಕಿ ಹರಿಯುತ್ತಿವೆ. ಸುಮಾರು 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…

ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಸ್ವಯಂ ನಿವೃತ್ತಿಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದೈಹಿಕವಾಗಿ ಅಸಮರ್ಥಗೊಂಡ ನಿಗಮದ ಅಧಿಕಾರಿಗಳು/ನೌಕರರಿಗೆ ಅನ್ವಯವಾಗುವಂತೆ ಆಕರ್ಶಣೀಯ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ