ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ರಾಯಚೂರು, ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಳೆರಾಯ ರಜೆ ಪಡೆಯದೆ ಸುರಿಯುತ್ತಿದ್ದಾನೆ. ರಸ್ತೆಗಳೆಲ್ಲ ನದಿಗಳಂತಾಗಿವೆ. ತಗ್ಗು ಪ್ರದೇಶದ ಮನೆಗಳೆಲ್ಲ ಜಲಾವೃತಗೊಂಡಿವೆ. ಬೆಂಬಡಿದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕಲಬುರಗಿಯಲ್ಲಂತೂ ಮಳೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಭೀಮಾ ಹಾಗೂ ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಈಗಾಗಲೇ ಹಲವರು ವಿವಿಧ ಮಳೆರಾಯನ ಅವಾಂತರಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಭಾಗದಲ್ಲಿಯೂ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ ಉದ್ದಕ್ಕೂ ಭಾರಿ ಪ್ರಮಾಣದ ನೀರು ಸಮುದ್ರ ಸೇರಿರುವುದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಬೀದರ್ ನಲ್ಲಿ ಮಳೆರಾಯನ ಆರ್ಭಟಕ್ಕೆ ಜನ ರೋಸಿ ಹೋಗಿದ್ದಾರೆ. ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. ಲಕ್ಷಾಂತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಯಾದಗಿರಿ – ಸೇಡಂ ಮುಖ್ಯ ರಸ್ತೆ ಸಂಪರ್ಕ ಕಳೆದುಕೊಂಡಿದೆ. ಹೀಗಾಗಿ ಜನ ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಳೆಯ ಅವಾಂತರಕ್ಕೆ ವ್ಯಕ್ತಿಯೊಬ್ಬ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಧಾರವಾಡ, ಬೆಳಗಾವಿಯಲ್ಲಿಯೂ ಕಳೆದ ಎರಡ್ಮೂರು ದನಗಳಿಂದ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಮುದ್ದೇಬಿಹಾಳ, ಬಸವನಬಾಗೇವಾಡಿ, ದೇವರಹಿಪ್ಪರಗಿ, ತಾಳಿಕೋಟಿ ಹಾಗೂ ಸಿಂದಗಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಸಾವಿರಾರು ಹೆಕ್ಟೆರ್ ಬೆಳೆಗಳು ಜಲಾವೃತಗೊಂಡಿದೆ. ಡೋಣಿ ಮತ್ತು ಭೀಮಾ ನದಿ ಮತ್ತೆ ಉಕ್ಕಿ ಹರಿಯುತ್ತಿವೆ. ಸುಮಾರು 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

Leave a Reply

Your email address will not be published. Required fields are marked *

You May Also Like

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಂಕ್ರಾಂತಿಯ ಪುಣ್ಯಸ್ನಾನ : ಇಬ್ಬರು ಯುವಕರು ನದಿ ಪಾಲು.

ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ…

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…