ಬೆಂಗಳೂರು : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಧೇಯಕ ವಿರೋಧಿಸಿ ರೈತ ಪರ ಸಂಘಟನೆಗಳು ನಾಳೆ ರಾಜ್ಯದಲ್ಲಿ ಬಂದ್ ಗೆ ಕರೆ ನೀಡಿವೆ. 

ಸರ್ಕಾರಕ್ಕೆ  ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ರೈತರು ಈ ಹೋರಾಟ ಕೈಗೊಂಡಿದ್ದಾರೆ. ರೈತರೊಂದಿಗೆ ವಿವಿಧ ಸಂಘಟನೆಗಳು ಕೂಡ ಕೈ ಜೋಡಿಸಿದ್ದರಿಂದಾಗಿ ನಾಳೆ ರಾಜ್ಯವು ಸಂಪೂರ್ಣವಾಗಿ ಬಂದ್ ಆಗಿರಲಿದೆ. 

ನಾಳೆ ಬಂದ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿ ಆದೇಶ  ಹೊರಡಿಸಿದೆ. ಆದರೆ, ಬಂದ್ ಸಂದರ್ಭದಲ್ಲಿ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಮಾತ್ರ ಕಾರ್ಯ ನಿರ್ವಹಿಸಲಿವೆ. ಹೊಟೇಲ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಸಾರಿಗೆ ಸಂಸ್ಥೆ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿವೆ. ಆದರೆ, ನಾಳೆಯ ಪರಿಸ್ಥಿತಿಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. 

ರೈತ ಪರ ಸಂಘಟನೆಗಳೊಂದಿಗೆ ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದ ವಿವಿಧ ಸಂಘಟನೆಗಳು, ಮಹಾದಯಿ ಹೋರಾಟ ಸಂಘಟನೆ, ಓಲಾ, ಊಬರ್, ಕ್ಯಾಬ್, ಆಟೋ,ಟ್ಯಾಕ್ಸಿ ಅಸೋಸಿಯೇಶನ್, ಆಟೋ ಮಿತ್ರ, ಪೀಸ್ ಆಟೋ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಟ್ಯಾಕ್ಸಿ ಮಾಲೀಕರ ಸಂಘಗಳು ಹೋರಾಟಕ್ಕೆ ಬೆಂಬಲ ನೀಡಿವೆ. ಹೀಗಾಗಿ ಹೋರಾಟ ನಾಳೆ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ಓಲಾ – ಉಬರ್, ಆಟೋ – ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿರುವ ಕಾರಣಕ್ಕೆ ಈ ಸೇವೆಗಳು ಜನರಿಗೆ ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಆಗಿರಲಿವೆ. ಅಂಗಡಿ –ಮುಂಗಟ್ಟುಗಳು ಬಂದ್ ಆಗಿರಲಿವೆ. ಮಾಲ್ ಗಳು ತೆರೆದಿರುವುದಿಲ್ಲ. ಆದರೆ, ಕೈಗಾರಿಕೆಗಳು ಮಾತ್ರ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಿವೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವೇಶ್ಯಾವಾಟಿಕೆ ಸಂತ್ರಸ್ತೆಯರನ್ನು ಪಾಲಕರಿಗೆ ಹಸ್ತಾಂತರಿಸಿ ಪೊಲೀಸರು!

ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ರಕ್ಷಣೆಗೆ ಒಳಗಾಗಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ಕೊರೊನಾದ ಭಯಕ್ಕೆ ಇಡೀ ಹಳ್ಳಿಯೇ ಸ್ತಬ್ಧ!

ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ. ಗಂಟಲು…

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…