ಗಜೇಂದ್ರಗಡ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕಾರ್ಮಿಕ ಹಾಗೂ ಜನಪರ ಸಂಘಟನೆಗಳು ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದವು. ಪಟ್ಟಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಎಪಿಎಂಸಿ ಮಾರುಕಟ್ಟೆ ಬಿಕೋ ಎನ್ನುತ್ತಿದ್ದವು.

ಜನರಿಂದ ಗಿಜಿಗುಡುತ್ತಿದ್ದ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸ್ಥಬ್ದಗೊಂಡಿತ್ತು. ಬೆಳಂ ಬೆಳಿಗ್ಗೆಯಿಂದಲೇ ಹೋರಾಟಗಾರರು ಬೀದಿಗಿಳಿದು, ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಅಂಗಡಿ ಮಾಲಿಕರಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಅಂಗಡಿ ಮಾಲಿಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ವಿರೋಧಿ ಮಸೋಧೆ ಹಿಂಪಡೆಲು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಿದ್ದರು.

ವಿವಿಧ ಸಂಘಟನೆ ಮುಖಂಡ ರಾದ ಅಶೋಕ ಬಾಗಮಾರ, ಎಂ.ಎಸ್.ಹಡಪದ, ಎಚ್.ಎಸ್. ಸೋಂಪೂರ, ವೀರಣ್ಣ ಸೊನ್ನದ, ಶಿವರಾಜ ಘೋರ್ಪಡೆ, ಯಲ್ಲಪ್ಪ ಬಂಕದ, ರಾಜು ಸಾಂಗ್ಲಿಕಾರ, ಶ್ರೀಧರ ಬಿದರಳ್ಳಿ‌ ಸೇರಿ ಹಲವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಹುಬ್ಬಳ್ಳಿ ತಲುಪಿದ ವಿವಿಧ ಜಿಲ್ಲೆಗಳ ಜನರು!!

ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ…

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಬಡ್ನಿ ಗ್ರಾಮದಲ್ಲಿ ಜೋಳದ ಬೆಳೆಗೆ ಬೆಂಕಿ

ಜೋಳದ ಬೆಳೆಗೆ ಬೆಂಕಿ ಬಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳದ ಬೆಳೆ ಹಾನಿಯಾಗೀಡಾಗಿದ ಘಟನೆ ತಾಲೂಕಿನ ಬಡ್ನಿ ಗ್ರಾಮದಲ್ಲಿ ನಡೆದಿದೆ.