ಗಜೇಂದ್ರಗಡ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕಾರ್ಮಿಕ ಹಾಗೂ ಜನಪರ ಸಂಘಟನೆಗಳು ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದವು. ಪಟ್ಟಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಎಪಿಎಂಸಿ ಮಾರುಕಟ್ಟೆ ಬಿಕೋ ಎನ್ನುತ್ತಿದ್ದವು.

ಜನರಿಂದ ಗಿಜಿಗುಡುತ್ತಿದ್ದ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸ್ಥಬ್ದಗೊಂಡಿತ್ತು. ಬೆಳಂ ಬೆಳಿಗ್ಗೆಯಿಂದಲೇ ಹೋರಾಟಗಾರರು ಬೀದಿಗಿಳಿದು, ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಅಂಗಡಿ ಮಾಲಿಕರಲ್ಲಿ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಅಂಗಡಿ ಮಾಲಿಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ವಿರೋಧಿ ಮಸೋಧೆ ಹಿಂಪಡೆಲು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಿದ್ದರು.

ವಿವಿಧ ಸಂಘಟನೆ ಮುಖಂಡ ರಾದ ಅಶೋಕ ಬಾಗಮಾರ, ಎಂ.ಎಸ್.ಹಡಪದ, ಎಚ್.ಎಸ್. ಸೋಂಪೂರ, ವೀರಣ್ಣ ಸೊನ್ನದ, ಶಿವರಾಜ ಘೋರ್ಪಡೆ, ಯಲ್ಲಪ್ಪ ಬಂಕದ, ರಾಜು ಸಾಂಗ್ಲಿಕಾರ, ಶ್ರೀಧರ ಬಿದರಳ್ಳಿ‌ ಸೇರಿ ಹಲವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಸ್ಕೂಟಿ ಮತ್ತು ಬಿಆರ್ ಟಿಎಸ್ ನಡುವೆ ಡಿಕ್ಕಿ : ಸ್ಕೂಟಿ ಸವಾರನ ಸ್ಥಿತಿ ಗಂಭೀರ

ಬಿಆರ್ ಟಿಎಸ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನ ಸ್ಥಿತಿ ಗಂಭೀರವಾದ ಘಟನೆ ನಗರದ ನವನಗರ ಆರ್ ಟಿಓ ಹತ್ತಿರ ನಡೆದಿದೆ.

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು!

ಮೈಸೂರು : ಗ್ರಾಮದೊಳಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸವು ವಶಕ್ಕೆ ಪಡೆದಿದ್ದಾರೆ.

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.