ಹಾವೇರಿ: ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.

ಅಲ್ಲದೇ ಭೂ ಸುಧಾರಣಾ ಕಾಯಿದೆ ತೆಗೆಯುವ ಬಗ್ಗೆ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಕಾಯಿದೆಯನ್ನು ತಿದ್ದುಪಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರೇ 79 ಎ ಮತ್ತು ಬಿಯನ್ನು ಅನ್ನು ಕೈಬಿಡಬೇಕೆಂದು ವಿಧಾನಸಭೆಯಲ್ಲಿಯೇ ಹೇಳಿದ್ದರು. ಅದು ವಿಧಾನಸಭೆಯಲ್ಲಿ ದಾಖಲೆಯೂ ಆಗಿದೆ. ಆದರೆ ಈಗ ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದೆ. ಕಾಂಗ್ರೆಸ್ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಸಣ್ಣ ರೈತನಿಗೂ ಸಹ ಅನುಕೂಲವಾಗುವಂತೆ ಕೃಷಿಕಾಯಿದೆಗಳನ್ನು ತಂದಿದ್ದಾರೆ. ಆದರೆ ವಿನಾಕಾರಣ ರಾಜಕೀಯ ದುರುದ್ದೇಶಕ್ಕಾಗಿ ಇದನ್ನು ಕಾಂಗ್ರೆಸ್, ಜೆಡಿಎಸ್ ವಿರೋಧಿಸುತ್ತಿವೆ ಎಂದರು.

ಭೂ ಸುಧಾರಣೆ ಕಾಯಿದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳುಬಿದ್ದಿರುವ 30-40 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಯಲು ಸಾಧ್ಯವಾಗುತ್ತದೆ. ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ. ಇದರಿಂದ ಯುವಕರಿಗೆ ಉದ್ಯೋಗವಕಾಶಗಳು ಹೆಚ್ಚಾಗಲಿವೆ ಎಂದು ಬಿ.ಸಿ.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

Рейтинг Букмекеров 53 711 Отзывов О Букмекерах Рф И мира, Ведущий Портал об Спорте И Ставках

В мы рейтинг входят самые БК конторы в интернете, работающие вопреки российской…

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.