ಗದಗ: ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕುರಿಗಾರರು ಕುರಿ, ಮೇಕೆ ಸಾಕಾನಣಿಕೆಯಿಂದ ತಮ್ಮ ಬದುಕನ್ನು ಜಿಲ್ಲೆಯಿಂದ ಜಿಲ್ಲೆಗೆ ತಾಲೂಕಿನಿಂದ ತಾಲೂಕಿಗೆ ಹೀಗೆ ಕುರಿಗಳ ಹಿಂಡನ್ನು ಕಟ್ಟಿಕೊಂಡು ಜೀವನ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ಕುರಿಗಳು ಯಾವುದೇ ರೋಗಕ್ಕೆ ತುತ್ತಾಗಿ ಮರಣ ಹೊಂದಿದಲ್ಲಿ ಕುರಿಗಾರರಿಗೆ ಪರಿಹಾರ ೊದಗಿಸುವ ನಿಟ್ಟಿನಲ್ಲಿ ಈ ಹಿಂದಿನ ಸರ್ಕಾರ ಅನುಗ್ರಹ ಯೋಜನೆಯನ್ನು ಜಾರಿಗೆ ತಂದಿತ್ತು.  

ಯೋಜನೆಯಿಂದ ಸಾವನ್ನಪ್ಪಿದ ಕುರಿಗಳಿಗೆ 5000 ರೂಪಾಯಿ ಸಹಾಯಧನ ನೀಡಿತ್ತು. ಇದರಿಂದ ಇದರಿಂದ ಕುರಿಗಾರರಿಗೆ ಅಲ್ಪಮಟ್ಟಿಗಾದರೂ ಅನುಕೂಲವಾಗಿತ್ತು. ಆದರೆ ಈ ಯೋಜನೆಯಲ್ಲಿ 3 ಕೋಟಿ 62 ಲಕ್ಷ ಅನುದಾನ ನೀಡುವುದು ಬಾಕಿಯಿದೆ. ಈ ಅನುದಾನವನ್ನು ಇತ್ತಿಚಿಗೆ ವಿವಿಧ ರೋಗಗಳಿಂದ ಸಾವನ್ನಪ್ಪಿದ ಕುರಿ ಮತ್ತು ಮೇಕೆಗಳಿಗೆ ಅನುದಾನ ಬಿಡುಗಡೆ ಮಾಡಿಕೊಡಬೇಕು. ಹಾಗೂ ಇತ್ತಿಚಿನ ಅವಧಿಯಲ್ಲಿ ಈ ಅನುಗ್ರಹ ಯೋಜನೆಯನ್ನು ಬಂದ್ ಮಾಡಿ ಕುರಿಗಾರರ ಬದುಕಿನ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ಕೂಡಲೇ ಯೋಜನೆ ಮುಂದುವರೆಸುವ ಮೂಲಕ ಬಾಕಿ ಇರುವ ಅನುದಾನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ಈ ವೇಳೆ ಮಂಜುನಾಥ ಜಡಿ, ಎಸ್.ಜಿ.ಹೇಮಂತ್, ರವಿ ಹುಡೇದ್, ಲಕ್ಷ್ಮಣ್ ಜಂತ್ಲಿ, ಕುಮಾರ್ ಮಾರನಬಸರಿ, ರವಿ ಜೋಗಿನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.  

Leave a Reply

Your email address will not be published. Required fields are marked *

You May Also Like

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

2020ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು…

ಶಾಲೆಗಳು ಪ್ರಾರಂಭವಾಗಲು ಕೂಡಿ ಬಂದಿದೆಯೇ ಮುಹೂರ್ತ!?

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಶಾಲೆಗಳು ಮುಚ್ಚಿವೆ. ಆದರೆ, ಸದ್ಯ ಕೊರೊನಾ ತಗ್ಗುತ್ತಿದ್ದು, ಶಾಲೆಗಳನ್ನು ತೆರೆಯುವ ಕುರಿತು ಚಿಂತನೆ ನಡೆಯುತ್ತಿದೆ.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.