ಲಕ್ಷ್ಮೇಶ್ವರ: ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಕಯಕುಮಾರ ಆಲೂರ ಮಾತನಾಡಿ, ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ಮಂಜೂರ ಆಗಿದ್ದು ಶಾಲೆಯ ಆಡಳಿತ ಮಂಡಳಿ ತಮ್ಮ ಇಷ್ಷ ಬಂದ ಹಾಗೆ ಕಾಮಗಾರಿ ಮಾಡುತ್ತಿದೆ. ಹೀಗಾಗಿ ಕಳಪೆ ಮಟ್ಟದಿಂದ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಶಾಲೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಕಳಪೆ ಕಾಮಗಾರಿ ನಡೆಸಿದ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಾಗರಾಜ ನಾವ್ಹಿ, ನಾಗರಾಜ ವಾಲಿಕಾರ, ಹನಮಂತ ದೊಡ್ಡಮನಿ, ಜಗದೀಶ ಗುಡಿ, ಪ್ರವೀಣ ಅಂಗಡಿ‌ ಇದ್ದರು.

Leave a Reply

Your email address will not be published. Required fields are marked *

You May Also Like

ಮಣಿಪುರ ವಿದ್ಯಾರ್ಥಿ ಸಂಘದಿಂದ ಸಚಿವ ಸಿ.ಸಿ.ಪಾಟೀಲ್ ಸಹಾಯಕ್ಕೆ ಕೃತಜ್ಞತೆ

ಮಣಿಪುರ ರಾಜ್ಯದ ವಿದ್ಯಾರ್ಥಿಗಳ ಸಂಘಕ್ಕೆ ಸಹಾಯ ಮಾಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರಿಗೆ ಮಣಿಪುರ ವಿದ್ಯಾರ್ಥಿ ಸಂಘ ಟ್ವೀಟ್ ಮೂಲಕ ಅಭಿನಂದಿಸಿದೆ.

ಸಾರಾಯಿ ಸೀಸೆಗಾಗಿ ಬಾರ್ ಮುಂದೆ ಕ್ಯೂ..!

ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ…!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…

ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ರಾಮಣ್ಣ

ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಿಗೆ ಸುಗಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.