ಲಕ್ಷ್ಮೇಶ್ವರ: ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಕಯಕುಮಾರ ಆಲೂರ ಮಾತನಾಡಿ, ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 3 ಲಕ್ಷ ರೂಪಾಯಿ ಮಂಜೂರ ಆಗಿದ್ದು ಶಾಲೆಯ ಆಡಳಿತ ಮಂಡಳಿ ತಮ್ಮ ಇಷ್ಷ ಬಂದ ಹಾಗೆ ಕಾಮಗಾರಿ ಮಾಡುತ್ತಿದೆ. ಹೀಗಾಗಿ ಕಳಪೆ ಮಟ್ಟದಿಂದ ಕಟ್ಟಡ ನಿರ್ಮಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಶಾಲೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಕಳಪೆ ಕಾಮಗಾರಿ ನಡೆಸಿದ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಾಗರಾಜ ನಾವ್ಹಿ, ನಾಗರಾಜ ವಾಲಿಕಾರ, ಹನಮಂತ ದೊಡ್ಡಮನಿ, ಜಗದೀಶ ಗುಡಿ, ಪ್ರವೀಣ ಅಂಗಡಿ‌ ಇದ್ದರು.

Leave a Reply

Your email address will not be published. Required fields are marked *

You May Also Like

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ಫೆ.27,28 ರಂದು ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ಜಿಲ್ಲಾ ಸಾಹಿತ್ಯ ಭವನದಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಹೇಳಿದರು.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ