ಶಿರಹಟ್ಟಿ: ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸ್ಥಳೀಯವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೇಂದ್ರವು ಕೆಲ ಕಾರಾಣಾಂತರಗಳಿಂದ ಲೋಕಾರ್ಪಣೆಗೊಳ್ಳುವುದು ತಡವಾಯಿತು. ಇದು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು ಸುಕ್ತ ರೀತಿಯ ಆಡಳಿತ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮೀಣ ಪ್ರದೇಶದ ಪ್ರತಿಭೆಗಳು ಈ ಇಲಾಖೆಯಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಬೇಕು. ನನ್ನ ಮತಕ್ಷೇತ್ರ ಹಾಗೂ ತಾಲುಕಾ ಕೇಂದ್ರಕ್ಕೆ ಅವಶ್ಯವಿರುವ ಇನ್ನು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವಿಸ್ತಾರಣಾಧಿಕಾರಿ ರತ್ನಮ್ಮ ಹೊಸಮನಿ, ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ, ತಾಲೂಕಾ ವಿಸ್ತರಣಾಧಿಕಾರಿ ಬಸವರಾಜ ಬಳ್ಳಾರಿ, ಸಿಪಿಐ ವಿಕಾಸ ಲಮಾಣಿ, ಪಿಎಸ್ಐ ಸುನಿಲಕುಮಾರ ನಾಯಕ್, ಜಿಪಂ ಮಾಜಿ‌ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಫಕ್ಕಿರೇಶ ರಟ್ಟಿಹಳ್ಳಿ, ದೇವಪ್ಪ ಲಮಾಣಿ, ತಿಪ್ಪಣ್ಣ ಕೊಂಚಿಗೇರಿ, ರೇಖಾ ಅಳವಂಡಿ, ನಾಗರಾಜ ಲಕ್ಕುಂಡಿ, ಜಾನು ಲಮಾಣಿ, ಪರಮೇಶ ಪರಬ, ಸಿ.ಸಿ.ನೂರಶೆಟ್ಟರ, ರಾಮಣ್ಣ ಡಂಬಳ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕಾಲೇಜ್ ಟೀಚರ್ತಿಯ ಸೇವಾ ಕಾರ್ಯ

ಗದಗ: ಕೊರೊನಾದ ಈ ಸಂಕಷ್ಟದಲ್ಲಿ ಅದೆಷ್ಟೋ ಜನರು ಬಡ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಕೆಲವರು ಪ್ರಾಮಾಣಿಕ ಸಹಾಯ ಮಾಡಿದರೆ ಇನ್ನು ಕೆಲವರ ಸಹಾಯದ ಉದ್ದೇಶವೇ ಬೇರೆಯದ್ದಾಗಿರುತ್ತದೆ.

ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ

ಮಹಾಮಾರಿ ಕರೊನಾ ವೈರಸ್‌ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದುತ್ ಸ್ಪರ್ಷ: ಕೂಲಿ ಕಾರ್ಮಿಕ ಸಾವು

ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ.