ಶಿರಹಟ್ಟಿ: ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸ್ಥಳೀಯವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೇಂದ್ರವು ಕೆಲ ಕಾರಾಣಾಂತರಗಳಿಂದ ಲೋಕಾರ್ಪಣೆಗೊಳ್ಳುವುದು ತಡವಾಯಿತು. ಇದು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು ಸುಕ್ತ ರೀತಿಯ ಆಡಳಿತ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮೀಣ ಪ್ರದೇಶದ ಪ್ರತಿಭೆಗಳು ಈ ಇಲಾಖೆಯಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಬೇಕು. ನನ್ನ ಮತಕ್ಷೇತ್ರ ಹಾಗೂ ತಾಲುಕಾ ಕೇಂದ್ರಕ್ಕೆ ಅವಶ್ಯವಿರುವ ಇನ್ನು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವಿಸ್ತಾರಣಾಧಿಕಾರಿ ರತ್ನಮ್ಮ ಹೊಸಮನಿ, ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ, ತಾಲೂಕಾ ವಿಸ್ತರಣಾಧಿಕಾರಿ ಬಸವರಾಜ ಬಳ್ಳಾರಿ, ಸಿಪಿಐ ವಿಕಾಸ ಲಮಾಣಿ, ಪಿಎಸ್ಐ ಸುನಿಲಕುಮಾರ ನಾಯಕ್, ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಫಕ್ಕಿರೇಶ ರಟ್ಟಿಹಳ್ಳಿ, ದೇವಪ್ಪ ಲಮಾಣಿ, ತಿಪ್ಪಣ್ಣ ಕೊಂಚಿಗೇರಿ, ರೇಖಾ ಅಳವಂಡಿ, ನಾಗರಾಜ ಲಕ್ಕುಂಡಿ, ಜಾನು ಲಮಾಣಿ, ಪರಮೇಶ ಪರಬ, ಸಿ.ಸಿ.ನೂರಶೆಟ್ಟರ, ರಾಮಣ್ಣ ಡಂಬಳ ಮುಂತಾದವರು ಉಪಸ್ಥಿತರಿದ್ದರು.