ಶಿರಹಟ್ಟಿ: ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸ್ಥಳೀಯವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೇಂದ್ರವು ಕೆಲ ಕಾರಾಣಾಂತರಗಳಿಂದ ಲೋಕಾರ್ಪಣೆಗೊಳ್ಳುವುದು ತಡವಾಯಿತು. ಇದು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು ಸುಕ್ತ ರೀತಿಯ ಆಡಳಿತ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮೀಣ ಪ್ರದೇಶದ ಪ್ರತಿಭೆಗಳು ಈ ಇಲಾಖೆಯಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಬೇಕು. ನನ್ನ ಮತಕ್ಷೇತ್ರ ಹಾಗೂ ತಾಲುಕಾ ಕೇಂದ್ರಕ್ಕೆ ಅವಶ್ಯವಿರುವ ಇನ್ನು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವಿಸ್ತಾರಣಾಧಿಕಾರಿ ರತ್ನಮ್ಮ ಹೊಸಮನಿ, ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ, ತಾಲೂಕಾ ವಿಸ್ತರಣಾಧಿಕಾರಿ ಬಸವರಾಜ ಬಳ್ಳಾರಿ, ಸಿಪಿಐ ವಿಕಾಸ ಲಮಾಣಿ, ಪಿಎಸ್ಐ ಸುನಿಲಕುಮಾರ ನಾಯಕ್, ಜಿಪಂ ಮಾಜಿ‌ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಫಕ್ಕಿರೇಶ ರಟ್ಟಿಹಳ್ಳಿ, ದೇವಪ್ಪ ಲಮಾಣಿ, ತಿಪ್ಪಣ್ಣ ಕೊಂಚಿಗೇರಿ, ರೇಖಾ ಅಳವಂಡಿ, ನಾಗರಾಜ ಲಕ್ಕುಂಡಿ, ಜಾನು ಲಮಾಣಿ, ಪರಮೇಶ ಪರಬ, ಸಿ.ಸಿ.ನೂರಶೆಟ್ಟರ, ರಾಮಣ್ಣ ಡಂಬಳ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ – ಲಕ್ಷಾಂತರ ನಷ್ಟ!

ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ಸರಕಾರಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಅನಿರ್ಧಿಷ್ಟಾವಧಿ ಧರಣಿ

ಉತ್ತರಪ್ರಭ ಸುದ್ದಿ ಮಸ್ಕಿ: ತಾಲೂಕಿನ ಉಸ್ಕಿಹಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಗ್ರಾಮಸ್ತರು ಮತ್ತು ವಿದ್ಯಾರ್ಥಿಗಳು…

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.