ಲಕ್ನೋ: ಬಾಬ್ರೀ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪು ಇಂದು ಹೊರ ಬಿದ್ದಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಆಪಾದಿತ ಎಲ್ಲಾ 32 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
ಈ ಮೂಲಕ ಕೋರ್ಟ್ ನೀಡಿದ ಈ ತೀರ್ಪು ನಿಂದಾಗಿ 28 ವರ್ಷಗಳ ಸುದೀರ್ಘ ಪ್ರಕರಣಕ್ಕೆ ತೆರೆ ಎಳೆದಂತಾಗಿದೆ. ಹಾಗೇ ಪ್ರಕರಣದ ಪ್ರಮುಖ ದೋಷಿಗಳಾದ ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ್ ಜೋಷಿ ಸೇರಿದಂತೆ ಇತರರು ನಿರಾಳರಾಗಿದ್ದಾರೆ.

ಆರೋಪಿಗಳ ವಿರುದ್ದ ಸೂಕ್ತ ಸಾಕ್ಷ್ಯಗಳಿಲ್ಲದ ಕಾರಣ 32 ಜನರನ್ನು ಆರೋಪ ಮುಕ್ತ ಗೊಳಿಸುತ್ತಿರುವುದಾಗಿ ಲಕ್ನೋ ಸಿಬಿಐ ವಿಶೇಷ ಕೋರ್ಟ್ ತಿಳಿಸಿದೆ.

ತೀರ್ಪಿನ ಪ್ರಕಾರ ಮಸೀದಿ ದ್ವಂಸ ಕಾರ್ಯ ಆಕಸ್ಮಿಕ, ಉದ್ರಿಕ್ತ ಕರಸೇವಕರು ಮಸೀದಿ ದ್ವಂಸ ಮಾಡಿದ್ದಾರೆ, ನಾಯಕರು ಗಲಭೆ ತಡೆಯಲು ಮುಂದಾಗಿದ್ದರೇ ಹೊರತು ಅದಕ್ಕೆ ಪ್ರಚೋದನೆ ನೀಡಿಲ್ಲ. ಬಿಜೆಪಿ ಹಾಗೂ ಆರ್.ಎಸ್. ಎಸ್ ನಾಯಕರ ಪಾತ್ರ ಇದರಲ್ಲಿ ಇಲ್ಲ ಎಂಬ ವಿಚಾರಗಳನ್ನು ಉಲ್ಲೇಖಿಸಿ ತಮ್ಮ ತೀರ್ಪು ನೀಡಿದರು.

ಇಂದು ಮುಂಜಾನೆಯೇ ತೀರ್ಪು ಪ್ರಕಟಿಸಲು ಸಿದ್ದತೆ ನಡೆಸಿದ್ದ ಲಕ್ನೋ ಕೋರ್ಟ್ ಸಕಲ ಸಿದ್ದತೆ ಮಾಡಿಕೊಂಡಿತ್ತು. ಈ ಕಾರಣಕ್ಕೆ ಕೋರ್ಟ್ ಆವರಣದಲ್ಲೂ ಬಿಗಿ ಭದ್ರತೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

You May Also Like

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ

ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಸಂಘರ್ಷ!

ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…