ಲಕ್ನೋ: ಬಾಬ್ರೀ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ತೀರ್ಪು ಇಂದು ಹೊರ ಬಿದ್ದಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಆಪಾದಿತ ಎಲ್ಲಾ 32 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
ಈ ಮೂಲಕ ಕೋರ್ಟ್ ನೀಡಿದ ಈ ತೀರ್ಪು ನಿಂದಾಗಿ 28 ವರ್ಷಗಳ ಸುದೀರ್ಘ ಪ್ರಕರಣಕ್ಕೆ ತೆರೆ ಎಳೆದಂತಾಗಿದೆ. ಹಾಗೇ ಪ್ರಕರಣದ ಪ್ರಮುಖ ದೋಷಿಗಳಾದ ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ್ ಜೋಷಿ ಸೇರಿದಂತೆ ಇತರರು ನಿರಾಳರಾಗಿದ್ದಾರೆ.

ಆರೋಪಿಗಳ ವಿರುದ್ದ ಸೂಕ್ತ ಸಾಕ್ಷ್ಯಗಳಿಲ್ಲದ ಕಾರಣ 32 ಜನರನ್ನು ಆರೋಪ ಮುಕ್ತ ಗೊಳಿಸುತ್ತಿರುವುದಾಗಿ ಲಕ್ನೋ ಸಿಬಿಐ ವಿಶೇಷ ಕೋರ್ಟ್ ತಿಳಿಸಿದೆ.

ತೀರ್ಪಿನ ಪ್ರಕಾರ ಮಸೀದಿ ದ್ವಂಸ ಕಾರ್ಯ ಆಕಸ್ಮಿಕ, ಉದ್ರಿಕ್ತ ಕರಸೇವಕರು ಮಸೀದಿ ದ್ವಂಸ ಮಾಡಿದ್ದಾರೆ, ನಾಯಕರು ಗಲಭೆ ತಡೆಯಲು ಮುಂದಾಗಿದ್ದರೇ ಹೊರತು ಅದಕ್ಕೆ ಪ್ರಚೋದನೆ ನೀಡಿಲ್ಲ. ಬಿಜೆಪಿ ಹಾಗೂ ಆರ್.ಎಸ್. ಎಸ್ ನಾಯಕರ ಪಾತ್ರ ಇದರಲ್ಲಿ ಇಲ್ಲ ಎಂಬ ವಿಚಾರಗಳನ್ನು ಉಲ್ಲೇಖಿಸಿ ತಮ್ಮ ತೀರ್ಪು ನೀಡಿದರು.

ಇಂದು ಮುಂಜಾನೆಯೇ ತೀರ್ಪು ಪ್ರಕಟಿಸಲು ಸಿದ್ದತೆ ನಡೆಸಿದ್ದ ಲಕ್ನೋ ಕೋರ್ಟ್ ಸಕಲ ಸಿದ್ದತೆ ಮಾಡಿಕೊಂಡಿತ್ತು. ಈ ಕಾರಣಕ್ಕೆ ಕೋರ್ಟ್ ಆವರಣದಲ್ಲೂ ಬಿಗಿ ಭದ್ರತೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

You May Also Like

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ದೆಹಲಿಯಲ್ಲಿ ಮೂರನೇ ಅಲೆ ಶುರುವಾಗಿದೆಯೇ?

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಮಹಾಮಾರಿಯ ಅಬ್ಬರ ಶುರುವಾಗಿದೆ. ಅಲ್ಲದೇ, ನಗರದಲ್ಲಿ ಮೂರನೇ ಅಲೆ ಶುರುವಾಗಿದೆ ಎಂಬ ಆತಂಕ ಶುರುವಾಗಿತ್ತು. ಸದ್ಯ ಮೂರನೇ ಅಲೆ ಶುರುವಾಗಿರುವುದನ್ನು ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಒಪ್ಪಿಕೊಂಡಿದ್ದಾರೆ.

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಶಾಲೆ ತೆರೆಯದಂತೆ ಪೋಷಕರು, ಶಿಕ್ಷಕರ ಒತ್ತಾಯ!

ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.